Advertisement

ಡಿಕೆಶಿಯನ್ನು ಎಚ್‌ಡಿಕೆ ಭೇಟಿ ಮಾಡಬೇಕಿತ್ತು

10:49 PM Sep 16, 2019 | Team Udayavani |

ಹುಬ್ಬಳ್ಳಿ: “ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಮಾತನಾಡಿಸಿ ಬರಬೇಕಾಗಿತ್ತು’ ಎಂದು ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಕೆಲವೊಮ್ಮೆ ಸ್ವಪಕ್ಷೀಯರನ್ನು ಎದುರು ಹಾಕಿಕೊಂಡು ಸಮ್ಮಿಶ್ರ ಸರ್ಕಾರ ಮುಂದುವರಿಕೆಗೆ ಶ್ರಮಿಸಿದ್ದರು.

Advertisement

ಕುಮಾರಸ್ವಾಮಿ ಅವರಿಗೆ ಬೆಂಬಲ ರೂಪದಲ್ಲಿ ನಿಂತಿದ್ದರು. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ್ದ ಕುಮಾರಸ್ವಾಮಿ ಡಿಕೆಶಿ ತಾಯಿಯನ್ನು ಭೇಟಿ ಮಾಡಿ ಧೈರ್ಯ ಹೇಳಿ ಬಂದಿದ್ದಾರೆ. ಆದರೆ, ದೆಹಲಿಗೆ ಹೋಗಿ ಡಿಕೆಶಿ ಅವರನ್ನು ಭೇಟಿ ಮಾಡಿ ಮಾತನಾಡಿಸಿ ಬರುವುದು ಸೂಕ್ತವಾಗಿತ್ತು ಎಂದರು.

ಡಿಕೆಶಿ ಬಂಧನ ವಿರುದ್ಧ ಬೆಂಗಳೂರಿನಲ್ಲಿ ಒಕ್ಕಲಿಗರ ಸಮುದಾಯ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳದಿರುವುದು, ದೆಹಲಿಗೆ ಹೋಗಿ ಡಿಕೆಶಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿ ಬಾರದಿರುವುದು ಬೇರೆ ಸಂದೇಶ ರವಾನಿಸಿದಂತಾಗುತ್ತದೆ ಎಂದು ಬಸವರಾಜ ಹೊರಟ್ಟಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next