Advertisement

Loan: ಸಾಲ ವಾಪಸ್‌ ಬರಲಿಲ್ಲವೆಂದು ಆತ್ಮಹತ್ಯೆ ಯತ್ನ

02:58 PM Aug 29, 2023 | Team Udayavani |

ಬೆಂಗಳೂರು:  ಸಾಲ ವಾಪಸ್‌ ಕೊಡದೆ ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಗಳ ವಿರುದ್ಧ ಆರೋಪಿಸಿ ಇಬ್ಬರು ಮಹಿಳೆಯರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿಲಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ವರ್ತೂರು ನಿವಾಸಿ ಆಶ್ವಿ‌ನಿ (28) ಹಾಗೂ ಸಿದ್ದಾಪುರ ನಿವಾಸಿ ದೀಪು (33) ಆತ್ಮಹತ್ಯೆಗೆ ಯತ್ನಿಸಿದವರು. ಶೃತಿ ಎಂಬ ಮಹಿಳೆ ವಿರುದ್ಧ ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಗೊತ್ತಾಗಿದೆ. ತಿಲಕನಗರ ಠಾಣೆ ವ್ಯಾಪ್ತಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಿಂದ ಬಂದ ಮಾಹಿತಿ ಮೇರೆಗೆ ಮೆಮೊ ಪಡೆದುಕೊಂಡು ಸಿದ್ದಾಪುರ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ ಎಂದು ತಿಲಕನಗರ ಠಾಣೆ ಪೊಲೀಸರು ಹೇಳಿದರು.

ಮಹಿಳೆಯರಿಬ್ಬರು ಸಂಬಂಧಿಕರಾಗಿದ್ದಾರೆ. 2020ರಲ್ಲಿ ಕಾರ್ಯಕ್ರಮವೊಂದರಲ್ಲಿ ಅಶ್ವಿ‌ನಿಗೆ ಆರೋಪಿತೆಯಾಗಿರುವ ಶೃತಿ ಪರಿಚಯವಾಗಿತ್ತು. ಆರು ತಿಂಗಳಲ್ಲಿ ಹಣ ವಾಪಸ್‌ ಕೊಡುವುದಾಗಿ ಹೇಳಿ ಹಂತ-ಹಂತವಾಗಿ 28 ಲಕ್ಷ ರೂ. ಪಡೆದುಕೊಂಡಿದ್ದಾಳೆ. ಆದರೆ, ವಿವಿಧ ಕಾರಣಗಳನ್ನು ನೀಡಿ ಹಣ ವಾಪಸ್‌ ನೀಡುತ್ತಿಲ್ಲ. ಹಣ ನೀಡುವಂತೆ ಕೇಳಿದರೆ ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವರ್ತೂರು ಪೊಲೀಸರಿಗೆ ಅಶ್ವಿ‌ನಿ ಸೋಮವಾರ ದೂರು ನೀಡಿದ್ದರು. ಅದರಂತೆ ಪೊಲೀಸರು ಎನ್‌ ಸಿಆರ್‌ ದಾಖಲಿಸಿದ್ದರು. ಈ ನಡುವೆ ಇಬ್ಬರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next