Advertisement

ಪುತ್ತೂರು :ಆತ್ಮಹತ್ಯೆಗೆ ಯತ್ನಿಸಿದ್ದ ಶಿಕ್ಷಕಿ‌ ಚಿಕಿತ್ಸೆ‌ ಫಲಕಾರಿಯಾಗದೆ ನಿಧ‌ನ

11:24 AM Dec 15, 2021 | Team Udayavani |

ಪುತ್ತೂರು : ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯ ಶಿಕ್ಷಕಿ‌ ಚಿಕಿತ್ಸೆ‌ ಫಲಕಾರಿಯಾಗದೆ ನಿಧ‌ನ ಹೊಂದಿದ ಘಟನೆ ಮಂಗಳವಾರ ನಡೆದಿದೆ.

Advertisement

ಹಾರಾಡಿ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದ ಪ್ರಿಯಾ ಕುಮಾರಿ ಮೃತರು.

ಪ್ರಿಯಾ ಅವರು ಸೋಮವಾರ ಬೆಳಿಗ್ಗೆ ವಿಟ್ಲ ಸಮೀಪದ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಪುತ್ತೂರಿನ ಖಾಸಗಿ‌ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ ಗುರುವಾರದವರೆಗೆ ಹಾರಾಡಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. ವರ್ಗಾವಣೆ ನಿಮಿತ್ತ ಶುಕ್ರವಾರ ಪಾಪೆಮಜಲು ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.ಭಾನುವಾರ ಮನೆಯಲ್ಲೇ ಇದ್ದರು.

ಸೋಮವಾರ ಬೆಳಿಗ್ಗೆ ಬೇಗನೇ ಎದ್ದಿದ್ದರು. ಪತಿ ಸ್ನಾನದ ಕೋಣೆಯಲ್ಲಿದ್ದಾಗ ಇವರು ಹೊರಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇವರ ಪತಿ ನಿವೃತ್ತ ಯೋಧರಾಗಿದ್ದು, ಪ್ರಸ್ತುತ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಹನ್ನೊಂದು ವರ್ಷಗಳ ಕಾಲ ಹಾರಾಡಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next