Advertisement

Mangalore: ಎಂಡೋಸಲ್ಫಾನ್‌ ಸಂತ್ರಸ್ತರಿಗೆ ಆರೋಗ್ಯ ಶಿಬಿರ

11:48 PM Apr 14, 2023 | Team Udayavani |

ಮಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣ ಶಿಬಿರಗಳನ್ನು ಎ. 15ರಿಂದ 19ರ ವರೆಗೆ ಜಿಲ್ಲೆಯ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಎ. 15ರಂದು ಪುತ್ತೂರಿನ ಪಾಣಾಜೆ, ಎ. 18ರಂದು ಬೆಳ್ತಂಗಡಿಯ ಕಣಿಯೂರು, ಪುತ್ತೂರಿನ ಕೋಯಿಲಾ, ಉಪ್ಪಿನಂಗಡಿ, ಸುಳ್ಯದ ಬೆಳ್ಳಾರೆ ಹಾಗೂ ಎ. 19ರಂದು ಬೆಳ್ತಂಗಡಿಯ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next