Advertisement

ಸ್ವಚ್ಛತೆಗೆ ಹಾಡಿ ಸುತ್ತಾಡಿದ ಆರೋಗ್ಯ ಸಿಬ್ಬಂದಿ

07:10 AM Jun 29, 2019 | Team Udayavani |

ಹುಣಸೂರು: ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಗಿರಿಜನ ಹಾಡಿಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಜಾಗೃತಿ ಜಾಥಾ ನಡೆಸಲಾಯಿತು.

Advertisement

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿಂದ ಹೊರಟ ಜಾಥಾಕ್ಕೆ ಚಾಲನೆ ನೀಡಿದ ಆಸ್ಪತ್ರೆ ವೈದ್ಯ ಡಾ.ಸಂದೀಪ್‌ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ-ಹಾಡಿಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಿಯಾದ ನಿರ್ವಹಣೆ ಮಾಡುವ ಮೂಲಕ ರೋಗ ತಡೆಗೆ ಮುಂದಾಗಬೇಕು.

ಜ್ವರ ಬಂದ ತಕ್ಷಣವೇ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಂತರ ಗ್ರಾಮದೊಳಗೆ ಅಡ್ಡಾಡಿ, ಸಾರ್ವಜನಿಕ ನಲ್ಲಿ ನೀರು ಸಂರ್ಪಕವಿರುವ ಸ್ಥಳಗಳನ್ನು ವೀಕ್ಷಿಸಿ, ತಕ್ಷಣವೇ ಕುಡಿಯುವ ನೀರು ಬಳಸುವ ಎಲ್ಲಾ ನಲ್ಲಿಗಳ ಸುತ್ತ ಶುಚಿತ್ವ ಕಾಪಾಡಬೇಕು ಎಂದು ಗ್ರಾಮ ಪಂಚಾಯ್ತಿ ಸಿಬ್ಬಂದಿಗೆ ಸೂಚಿಸಿದರು.

ಜಾಥಾದಲ್ಲಿ ಆರೋಗ್ಯ ಇಲಾಖೆಯ ಚಂದ್ರಶೇಖರ್‌, ನಿತ್ಯ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಗಿರಿಜನರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next