Advertisement

ಮನೆಗೆ ತೆರಳಿ ಆರೋಗ್ಯ ತಪಾಸಣೆ

07:02 AM May 09, 2020 | Suhan S |

ಶಿಗ್ಗಾವಿ: ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಹನುಮಂತಪ್ಪ ಅವರೊಂದಿಗೆ ಸಭೆ ನಡೆಸಿದ ಖಾಸಗಿ ಚಿಕಿತ್ಸಾಲಯಗಳ ವೈದ್ಯರ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ 7ರಿಂದಲೇ ಪ್ರತಿ ವಾರ್ಡ್‌ಗಳ ಮನೆಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿ ಜನತೆಗೆ ಕೋವಿಡ್ ಸೋಂಕಿನ ಕುರಿತು ಅರಿವು ಮೂಡಿಸುವ ಕಾರ್ಯ ಮಾಡಿದರು.

Advertisement

ಖಾಸಗಿ ಚಿಕಿತ್ಸಾಲಯದ ವೈದ್ಯರ ಸಂಘದ ಅಧ್ಯಕ್ಷ ಡಾ| ಕೆ. ಪ್ರಶಾಂತ ಮಾತನಾಡಿ, ದೇಶದ ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದ ಜನತೆ ಸ್ವಗ್ರಾಮಗಳಿಗ ಬಂದಿದ್ದು, ಭಯದ ವಾತಾವರಣ ದೂರ ಮಾಡುವ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ರೆಡ್‌ ಜೋನ್‌ನಲ್ಲಿರುವ ಪ್ರದೇಶಗಳಿಂದ ಬಂದ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಂಡು 15-20 ದಿನಗಳವರೆಗೆ ಮನೆಯಲ್ಲಿಯೇ ಇರಬೇಕು ಎಂದು ಸಲಹೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ನರ್ಸ್ ಗಳು, ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸೇರಿ ಸೇವೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next