ವಿಧಾನಪರಿಷತ್ತು: “ಆರೋಗ್ಯ ಕರ್ನಾಟಕ’ ಯೋಜನೆ ಜಾರಿ ಬಗ್ಗೆ ಯಾವುದೇ ಅನುಮಾನಬೇಡ. ಎಲ್ಲ ಗೊಂದಲಗಳನ್ನು ನಿವಾರಿಸಿಕೊಂಡು ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಕಾನೂನು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ವಾಜಪೇಯಿ ಆರೋಗ್ಯಶ್ರೀ, ರಾಜೀವ ಆರೋಗ್ಯ ಭಾಗ್ಯ ಮತ್ತು ಯಶಸ್ವಿನಿ ಯೋಜನೆಯಿಂದ ಬಡವರಿಗೆ ಲಾಭವಾಗುತ್ತಿತ್ತು. ಆದರೆ, ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತರುವುದಾಗಿ ಸರ್ಕಾರ ಹೇಳಿದೆ. ಅತ್ತ ಹೊಸ ಯೋಜನೆಯೂ ಅನುಷ್ಠಾನಕ್ಕೆ ಬಂದಿಲ್ಲ. ಇರುವ ಹಳೆ ಯೋಜನೆಗಳು
ಸಹ ಸ್ಥಗಿತಗೊಂಡಿದೆ ಎಂದು ಸರ್ಕಾರದ ವಿರುದಟಛಿ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲರಿಗೂ ಆರೋಗ್ಯ ಸೌಲಭ್ಯ ಒದಗಿಸುವ ಉದ್ದೇಶದಿಂದ “ಆರೋಗ್ಯ ಕರ್ನಾಟಕ’ ಯೋಜನೆ ಜಾರಿಗೆ ತರಲಾಗಿದೆ. ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಈಗಿರುವ ಎಲ್ಲ ಆರೋಗ್ಯ ಯೋಜನೆಗಳನ್ನು ಕ್ರೋಢೀಕರಿಸಿ ಆರೋಗ್ಯ ಕರ್ನಾಟಕ ಯೋಜನೆ
ಅನುಷ್ಠಾನಕ್ಕೆ ತರಲಾಗುವುದೆಂದರು.