Advertisement
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ವಿರೋಧ ಪಕ್ಷದ ನಾಯಕರು ಅನಗತ್ಯವಾಗಿ ಆರೋಪ ಮಾಡಬಾರದು ಆಡಳಿತ ಪಕ್ಷ ವಿರೋಧ ಪಕ್ಷ ಅಂತ ಇರಬಾರದು ಎಲ್ಲಾ ಒಟ್ಟಿಗೆ ಇರಬೇಕು ಒಬ್ಬ ವ್ಯಕ್ತಿ ಇದನ್ನು ಮಾಡಲು ಸಾಧ್ಯವಿಲ್ಲ ಎಲ್ಲರೂ ಕೈ ಜೋಡಿಸಬೇಕು ಎಂದರು.
Related Articles
Advertisement
ಹೊಸ ಪ್ರಕರಣ ಯಾವ ರೀತಿಯಲ್ಲಿ ಇಳಿಕೆ ಆಗಬೇಕು ಎನ್ನುವ ಹಿನ್ನಲೆಯಲ್ಲಿ ಕರ್ಫ್ಯೂ ವಿಧಿಸಿದ್ದಾರೆ ಈ ಸಮಯದಲ್ಲಿ ಎಲ್ಲರೂ ಮನೆಯಲ್ಲಿ ಇರಬೇಕು, ಅನಗತ್ಯವಾಗಿ ಓಡಾಡಬಾರದು . ಪಾಸಿಟಿವ್ ಬಂದವರು ಬೇರೆಯವರ ಜೊತೆಗೆ ಬೆರೆಯಬಾರದು. ಹೀಗೆ ಮಾಡಿದರೆ ನೀವು ಸೂಪರ್ ಸ್ಪ್ರೇಡರ್ ಆಗುತ್ತಿರಿ. ಇದು ಕಾನೂನಿನ ದೃಷ್ಟಿಯಿಂದ ಹಾಗೂ ಆರೋಗ್ಯ ದೃಷ್ಟಿಯಿಂದ ಸರಿ ಅಲ್ಲ. ಸೂಕ್ತ ವ್ಯವಸ್ಥೆ ಇಲ್ಲ ಅಂದರೆ ಸ್ಥಳೀಯ ಕೋವಿಡ್ ಕೇರ್ ಸೆಂಟರ್ ಗೆ ಹೋಗಿ ದಾಖಲು ಆಗಿ ಎಂದು ಸಲಹೆ ನೀಡಿದರು.
ಆಕ್ಸಿಜನ್ ಬೇಕಾದವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ 2000 ರಿಂದ 3000 ಬೆಡ್ ವ್ಯವಸ್ಥೆ ಮಾಡುತ್ತೇವೆ. ವಿಕ್ಟೋರಿಯಾ, ವಾಜಪೇಯಿ ಆಸ್ಪತ್ರೆ ಸೇರಿದಂತೆ ಎಲ್ಲಾ ಕಡೆ ಬೆಡ್ ಹೆಚ್ಚಿಗೆ ಕ್ರಮ ಕೈಗೊಳ್ಳುತ್ತೇವೆ. ಐಸಿಯು ಹಾಸಿಗೆ ಸಿಗದೆ ಪರದಾಡುವುದನ್ನು ತಪ್ಪಿಸಬೇಕು. ಆರೋಗ್ಯ ವ್ಯವಸ್ಥೆ ಬಲಿಷ್ಠವಾಗಿ ಇರಬೇಕು ನಾವು ಸಮರ್ಥವಾಗಿ ಇರಬೇಕು ಎಂದು ರಾಜ್ಯದ ಎಲ್ಲಾ ಕಡೆ ಮೇಕ್ ಶಿಫ್ಟ್ ಆಸ್ಪತ್ರೆ ಇರಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.
ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡುವುದಕ್ಕೆ 50 ರಿಂದ 100 ಹಾಸಿಗೆ ಇರಬೇಕು. 20 ಹಾಸಿಗೆಗೆ ವೆಂಟಿಲೇಟರ್ ಇರುವ ಹಾಗೆ ವ್ಯವಸ್ಥೆ ಮಾಡುವ ಚಿಂತನೆ ಇದೆ. 40000 ಪೋರ್ಟಬಲ್ ಆಕ್ಸಿಜನ್ ಕಾನ್ಸಂಟ್ರೇಶನ್ ಬೇಕಾಗುತ್ತದೆ. ಇದನ್ನು ಬೇರೆ ಕಡೆಯಿಂದ ತರಿಸಿಕೊಳ್ಳಬೇಕಿದೆ. ಸರ್ಕಾರಿ ಶಾಲೆ, ಚೌಟ್ರಿ ಎಲ್ಲಾ ಕಡೆ ಸೂಕ್ತ ಸೌಲಭ್ಯ ಇರುವ ಕಡೆ ಜಿಲ್ಲಾಧಿಕಾರಿ 14 ದಿನಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ತಾಕೀತು ಮಾಡಿದರು.