Advertisement

ಆರೋಗ್ಯಕರ ಬದುಕಿಗೆ ಕಾಳುಮೆಣಸಿನ ಸೂತ್ರ

03:37 PM Jul 12, 2021 | ಆದರ್ಶ ಕೊಡಚಾದ್ರಿ |

ಕರಿಮೆಣಸು ಒಂದು ಸಾಂಬಾರ ಬೆಳೆಯಾಗಿದ್ದು, ಪ್ರಾಚೀನ ಕಾಲದಿಂದಲೂ ಆಹಾರ ಪದಾರ್ಥಗಳನ್ನು ತಯಾರಿಸುವುದು ಮಾತ್ರವಲ್ಲದೆ  ಆಯುರ್ವೇದ ಔಷಧಗಳಲ್ಲೂ ಉಪಯೋಗಿಸುತ್ತಾರೆ.

Advertisement

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಧಿಕವಾಗಿ ಬೆಳೆಯಲಾಗುವ ಈ  ಕರಿಮೆಣಸಿನ ಬಳ್ಳಿಯ ಹಣ್ಣನ್ನು ಒಣಗಿಸಿ ಕರಿಮೆಣಸಿನ ಕಾಳುಗಳನ್ನು ಪಡೆಯುವರು. ಭಾರತದಲ್ಲಿ ಮಾತ್ರವಲ್ಲದೆ ವಿದೇಶಿ ಆರೋಗ್ಯ ಪದ್ದತಿಯಲ್ಲಿಯೂ ಬಹಳಷ್ಟು ಹೆಚ್ಚಾಗಿ ಬಳಕೆ ಮಾಡುವ ಈ ಕಾಳುಮೆಣಸು, ತಿನ್ನುವ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವುದರೊಂದಿಗೆ ಹಲವು ರೀತಿಯ ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಕಾಳು ಮೆಣಸಿನ ಉಪಯೋಗಗಳು

– ಕಾಳುಮೆಣಸನ್ನು ಹಾಲಿನೊಂದಿಗೆ ಚೆನ್ನಾಗಿ ತೇದು ಈ ಮಿಶ್ರಣವನ್ನು ಹಚ್ಚುವುದರಿಂದಾಗಿ ಉಳುಕಿನ ಕಾರಣದಿಂದ ಉಂಟಾಗುವ ನೋವನ್ನು ಇದು ಕಡಿಮೆ ಮಾಡುತ್ತದೆ.

– ಒಂದು ಚಮಚ ಕಾದ ತುಪ್ಪಕ್ಕೆ ಕಾಳುಮೆಣಸಿನ ಪುಡಿ ಮತ್ತು ಉಪ್ಪು ಸೇರಿಸಿ ಅನ್ನದಲ್ಲಿ ಹಾಕಿಕೊಂಡು ತಿಂದರೆ ಅಜೀರ್ಣ ಹೊಟ್ಟೆ, ಉಬ್ಬರ ದೂರವಾಗುತ್ತದೆ.

Advertisement

-ಕಾಳುಮೆಣಸನ್ನು ಜಜ್ಜಿ ಬಾಯಲ್ಲಿ ಹಾಕಿಕೊಂಡು ರಸವನ್ನು ನುಂಗುತ್ತಿದ್ದರೆ ನೆಗಡಿ ನಿವಾರಣೆಯಾಗುತ್ತದೆ.

-ಕಾಳುಮೆಣಸಿನ ಪುಡಿ ಮತ್ತು ಬೆಲ್ಲವನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುತ್ತದೆ.

-ಒಂದು ಲೋಟ ಬಿಸಿ ಹಾಲಿಗೆ ಅರ್ಧ ಚಮಚ ಅರಶಿನದ ಪುಡಿಯನ್ನು ಹಾಗೂ ಅರ್ಧ ಚಮಚ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಕುಡಿಯೂದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

-ಕಾಳುಮೆಣಸು ಮತ್ತು ಚಿಟಿಕೆ ಉಪ್ಪನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಗಂಟಲು ನೋವು ವಾಸಿಯಾಗುತ್ತದೆ.

-ಮೊಸರು ಅನ್ನಕ್ಕೆ ಕಾಳುಮೆಣಸಿನ ಪುಡಿ ಮತ್ತು ಬೆಲ್ಲವನ್ನು ಹಾಕಿಕೊಂಡು ಊಟ ಮಾಡಿದರೆ ಮೂತ್ರದ್ವಾರ ಮತ್ತು ಗುದದ್ವಾರದಲ್ಲಿ ಉಂಟಾಗುವ ಉರಿ ಕಡಿಮೆಯಾಗುತ್ತದೆ.

-ಒಂದು ಬಟ್ಟಲು ಹಾಲಿಗೆ ಒಂದು ಚಿಟಿಕೆ ಅರಿಶಿಣದ ಪುಡಿ, ಎರಡು ಚಿಟಿಕೆ ಕಾಳುಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ ರಾತ್ರಿ ಊಟ ಮಾಡಿದ ಮೇಲೆ ಕುಡಿದರೆ ನೆಗಡಿ, ಕೆಮ್ಮು ಗುಣವಾಗುತ್ತದೆ.

-ನುಗ್ಗೆ ಸೊಪ್ಪಿನ ರಸಕ್ಕೆ ಕಾಳುಮೆಣಸನ್ನು ಅರೆದು ಹಾಕಿ ಕಲಸಿ ಹಣೆಗೆ ಹಚ್ಚಿದರೆ ತಲೆನೋವು ನಿವಾರಣೆಯಾಗುತ್ತದೆ.

-ಚೆನ್ನಾಗಿ ಮಾಗಿದ ರಸ ಬಾಳೆಹಣ್ಣಿನೊಂದಿಗೆ ಅರ್ಧ ಟೀ ಚಮಚ ಕಾಳು ಮೆಣಸಿನಪುಡಿ ಸೇರಿಸಿ ದಿನದಲ್ಲಿ ಮೂರು ಬಾರಿ ಸೇವಿಸಿದರೆ ನೆಗಡಿ ಕೆಮ್ಮು ಗುಣವಾಗುತ್ತದೆ.

-ಕಾಳು ಮೆಣಸಿನ ಪುಡಿಗೆ ,ಸ್ಪಲ್ಪ ಶುಂಠಿ, ಒಂದು ಈರುಳ್ಳಿ, ಜೀರಿಗೆ, ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಸರಿಯಾಗಿ ಕುದಿಸಿ. ಚೆನ್ನಾಗಿ ಕುದ್ದ ಈ ಕಷಾಯವನ್ನು ಸೇವನೆ ಮಾಡುವುದರಿಂದ ಮಳೆಗಾಲದಲ್ಲಿ ಕಂಡುಬರುವ ಶೀತ, ಕೆಮ್ಮು ಹಾಗೂ ಜ್ವರದ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

– ಹುಣಿಸೆ ಹಣ್ಣು, ಪುದಿನಾ, ಕಾಳುಮೆಣಸು, ಏಲಕ್ಕಿಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನುಣ್ಣಗೆ ಅರೆದು ಉಪ್ಪು ಹಾಕಿ ತಿಂದರೆ ಹೊಟ್ಟೆನೋವು ಕಡಿಮೆಯಾಗುತ್ತದೆ.

-ಮೆಣಸಿನ ಕಾಳನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚಿಕೊಂಡರೆ ಹಲ್ಲುನೋವು ದೂರವಾಗುತ್ತದೆ.

-ಒಂದು ವೀಳ್ಯದೆಲೆಗೆ 4 ಕಾಳುಮೆಣಸು ಮತ್ತು ಎರಡು ಹರಳು ಉಪ್ಪು ಹಾಕಿಕೊಂಡು ಚೆನ್ನಾಗಿ ಅಗಿದು ತಿಂದರೆ ಕಫ ಹೋಗುತ್ತದೆ.

-ಮೆಣಸಿನ ಕಾಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚಿದರೆ ಮೊಡವೆ ನಿವಾರಣೆಯಾಗುವುದು.

-ಮೆಣಸಿನ ಕಾಳನ್ನು ತುಪ್ಪದಲ್ಲಿ ಹುರಿದು ನುಣ್ಣಗೆ ಪುಡಿಮಾಡಿ ಜೇನುತುಪ್ಪದಲ್ಲಿ ಬೆರೆಸಿ ದಿನಕ್ಕೆ ಎರಡು ಮೂರು ಬಾರಿ ಸೇವಿಸಿದರೆ ನೆಗಡಿ ಕೆಮ್ಮು ಮತ್ತು ರೋಗಗಳು ಕಡಿಮೆಯಾಗುತ್ತದೆ.

 

Advertisement

Udayavani is now on Telegram. Click here to join our channel and stay updated with the latest news.

Next