Advertisement

ಆಧಾರ್‌ ಮರುಪರಿಶೀಲನಾ ಅರ್ಜಿಗಳ ವಿಚಾರಣೆ ನಾಳೆ

09:00 AM Jun 08, 2020 | mahesh |

ಹೊಸದಿಲ್ಲಿ: ಕೇಂದ್ರ ಸರಕಾರದ ಆಧಾರ್‌ ಯೋಜನೆಗೆ ಸಾಂವಿಧಾನಿಕ ಮಾನ್ಯತೆ ನೀಡಿದ್ದನ್ನು ಪ್ರಶ್ನಿಸಿ ಹಾಗೂ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜೂ.9ರಂದು ಸುಪ್ರೀಂಕೋರ್ಟ್‌ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ದೆ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಮತ್ತು ಎಲ್ ನಾಗೇಶ್ವರ ರಾವ್‌ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. 2018ರ ಸೆ.26ರಂದು ಈ ಕುರಿತು ನೀಡಿದ್ದ ತೀರ್ಪಿನಲ್ಲಿ ಆಧಾರ್‌ನ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದಿದ್ದ ಕೋರ್ಟ್‌, ಬ್ಯಾಂಕ್‌ ಖಾತೆಗಳು, ಮೊಬೈಲ್‌ ಫೋನುಗಳಿಗೆ ಆಧಾರ್‌ ಜೋಡಣೆ, ಶಾಲಾ ಪ್ರವೇಶಕ್ಕೆ ಆರ್ಧಾ ಕಡ್ಡಾಯ ಎಂಬಿತ್ಯಾದಿ ನಿಬಂಧನೆಗಳನ್ನು ರದ್ದು ಮಾಡಿತ್ತು. ಅರ್ಜಿದಾರರ ಪರವಾಗಿ ನ್ಯಾಯವಾದಿ ಶ್ಯಾಮ್‌ ದಿವಾನ್‌ ಕೋರಿಕೆ ಸಲ್ಲಿಸಿದ್ದು, ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಕ್ತ ಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next