Advertisement

ಹಲ್ಲೆ ಕೇಸ್; ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

05:24 PM Feb 23, 2018 | Sharanya Alva |

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ನಾಳೆಗೆ ಮುಂದೂಡಿದೆ.

Advertisement

3ನೇ ವ್ಯಕ್ತಿ ವಾದ ಆಲಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಕೋರ್ಟ್ ನಾಳೆ ಆದೇಶ ನೀಡಲಿದೆ. ಅಲ್ಲದೇ ಅರ್ಜಿಗೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುವಂತೆ ಎಸ್ ಪಿಪಿ ಶ್ಯಾಮ್ ಸುಂದರ್ ಮಾಡಿಕೊಂಡ ಮನವಿಗೆ ಕೋರ್ಟ್ ಅವಕಾಶ ನೀಡಿದೆ.

ಹ್ಯಾರಿಸ್ ಪುತ್ರ ನಲಪಾಡ್ ಪರ ವಕೀಲ ಟ್ಯಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಫೆ.26ರಂದು ಅರ್ಜಿಗೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next