Advertisement

ಹೃದಯಾಘಾತದಿಂದ ಬಿಳಿಕೆರೆ ಠಾಣೆಯ ಎಎಸ್ಐ ಕೃಷ್ಣೇಗೌಡ ಸಾವು!

09:59 PM Jul 09, 2020 | sudhir |

ಮೈಸೂರು: ತೀವ್ರ ಹೃದಯಾಘಾತದಿಂದಾಗಿ ಬಿಳಿಕೆರೆ ಪೊಲೀಸ್ ಠಾಣೆಯ ಎಎಸ್ಐ ಕೃಷ್ಣೇಗೌಡ(56) ಅವರು ಗುರುವಾರ ಮೃತಪಟ್ಟಿದ್ದಾರೆ.

Advertisement

ಮೂಲತಃ ಹೊಳೆನರಸಿಪುರದವರಾದ ಕೃಷ್ಣೇಗೌಡ ಬಿಳಿಕೆರೆ ಪೊಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಎರಡು ದಿಗಳ ಹಿಂದೆ ಅವರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಗುರುವಾರ ಬೆಳಗಿನ ಜಾವ ಅವರಿಗೆ ಆಸ್ಪತ್ರೆಯಲ್ಲಿಯೇ ತಿವ್ರ ಎದೆನೋವು ಕಾಣಿಸಿಕೊಂಡಿದೆ. ವೈದ್ಯರು ಚಿಕಿತ್ಸೆ ಆರಂಭಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಹಾಗು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಬಿಳಿಕೆರೆ ಠಾಣೆ ಎಸ್ಐ ಜಯಪ್ರಕಾಶ್ ಆಸ್ಪತ್ರೆಗೆ ಭೇಟಿ ನಿಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next