Advertisement

ಕಾರು ಪ್ರಯಾಣದ ವೇಳೆ ಹೃದಯಾಘಾತ: ಉಪ್ಪಿನಂಗಡಿ ವಿಡಿಯೋಗ್ರಾಫರ್ ನಿಧನ

03:23 PM Oct 06, 2019 | keerthan |

ಉಪ್ಪಿನಂಗಡಿ: ಕಾರಿನಲ್ಲಿ ಪ್ರಯಾಣಿಸುವ ವೇಳೆ ಹೃದಯಾಘಾತವಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ರವಿವಾರ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಕಬಕ ಗ್ರಾಮದ ಶೇವಿರೆ ನಿವಾಸಿ. ಬಾಲಸುಬ್ರಮಣ್ಯ (34) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ತನ್ನ ಗೆಳೆಯನೊಂದಿಗೆ ಪುತ್ತೂರಿನಿಂದ ಉಪ್ಪಿನಂಗಡಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಉಪ್ಪಿನಂಗಡಿಯಲ್ಲಿ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಳೆದ 1 ವರ್ಷವಷ್ಟೇ ಮದುವೆಯಾಗಿದ್ದರು. ಮೃತರು ಪತ್ನಿ ಶ್ವೇತಾರನ್ನು ಅಗಲಿದ್ದಾರೆ.

ಪುತ್ತೂರಿನ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಉಪ್ಪಿನಂಗಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next