Advertisement

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

12:55 AM May 05, 2024 | Team Udayavani |

ಪುತ್ತೂರು: ಮಂಗಳೂರಿನಲ್ಲಿ ಹೊಟೇಲ್‌ ಉದ್ಯಮ ನಡೆಸುತ್ತಿದ್ದ ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಅವರು ಮೇ 3ರಂದು ಹೃದಯಾಘಾತದಿಂದ ನಿಧನ ಹೊಂದಿದರು.

Advertisement

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬಾಲಕೃಷ್ಣ ಗೌಡ ಅವರು ಬೈಕ್‌ ಓಡಿಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ರಿಕ್ಷಾ ಚಾಲಕನಿಗೆ ಹೃದಯಾಘಾತ
ವಿಟ್ಲ: ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಅವರು ಮೇ 3ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವರು, ಶುಕ್ರವಾರ ಮಧ್ಯಾಹ್ನ ನಮಾಜ್‌ ಮುಗಿಸಿ ಮನೆಗೆ ತೆರಳಿದ್ದರು.

ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ ಅಶ್ರಫ್ ಅವರ ಪತ್ನಿ ಮನೆಗೆ ಬಂದಾಗ ಬಾಗಿಲು ಹಾಕಿತ್ತು. ಬಳಿಕ ಘಟನೆ ಬೆಳಕಿಗೆ ಬಂದಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next