Advertisement

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

11:45 PM Apr 26, 2024 | Team Udayavani |

ತುಮಕೂರು: ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಾರ್ಡಿಯಾಕ್‌ ಫ್ರಾಂಟಿಡಾ ಸಂಸ್ಥೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ 63 ವರ್ಷದ ನಾಸಿರ್‌ ಅಲಿ ಖಾನ್‌ ಅವರು ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

Advertisement

ಎ.20ರಿಂದ ಹೃದಯ ಸಮಸ್ಯೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಸಿರ್‌ ಅಲಿ ಖಾನ್‌ ಅವರು ಮತದಾನದ ದಿನ ಹೃದಯದ ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿತ್ತು. ಆದರೆ ಅವರು ಮತದಾನದಲ್ಲಿ ಭಾಗವಹಿಸಬೇಕೆಂಬ ಆಸೆ ವ್ಯಕ್ತಪಡಿಸಿದ್ದರಿಂದ ವೈದ್ಯರು ಅವಕಾಶ ಮಾಡಿಕೊಟ್ಟರು. ಕುರಿಪಾಳ್ಯ ಕಾಲನಿಯ ಮತಗಟ್ಟೆಯಲ್ಲಿ ಬಂಧುಗಳ ಸಹಾಯದಿಂದ ಮತ ಚಲಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next