Advertisement

ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ , 3 ಸಾವು

12:48 PM Apr 18, 2019 | sudhir |

ಬೆಂಗಳೂರು : ಬಿಸಿಲಿನ ಬೇಗೆಯಲ್ಲಿ ನಲುಗಿದ ಬೆಂಗಳೂರಿನ ಜನತೆಗೆ ವರುಣನ ಸಿಂಚನವಾಗಿದೆ. ಬುಧವಾರ ಸಂಜೆಯ ವೇಳೆಗೆ ಬೆಂಗಳೂರು ನಗರದ ಕೆಲವು ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು ರಾಜ್ಯ ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಘಟನೆ 1 :ಲುಂಬಿನಿ ಗಾರ್ಡನ್​ ಬಳಿಯ ಮರವೊಂದು ಉರುಳಿ ಬೈಕ್ ಸವಾರನ ಮೇಲೆ ಬಿದ್ದು ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯು ಕುಣಿಗಲ್ ಮೂಲದ ಕಿರಣ್ (27) ಎಂದು ತಿಳಿದುಬಂದಿದ್ದು ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಘಟನೆ 2 : ಮನೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ ಹೊಸಹಳ್ಳಿಯಲ್ಲಿ ಸಂಭವಿಸಿದೆ ಮೃತರು ಭಾಗ್ಯಮ್ಮ(38) ವೆಂಕಟೇಶ (8) ಎಂದು ಗುರುತಿಸಲಾಗಿದೆ.

ಇನ್ನು ಎರಡು ದಿನ ಮಳೆ ಸಾಧ್ಯತೆ :
ರಾಜ್ಯ ರಾಜಧಾನಿಯ ಕೆಲವು ಭಾಗಗಳಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next