Advertisement

ತುಂಗಭದ್ರಾ ನದಿಯಲ್ಲಿ ಹೆಚ್ಚಿದ ಪ್ರವಾಹ: ಹಲವು ಪ್ರದೇಶಗಳು ಜಲಾವೃತ

04:27 PM Aug 09, 2020 | keerthan |

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದ್ದು ಜಿಲ್ಲೆಯ ಜೀವನದಿ ತುಂಗಭದ್ರಾದಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಿದೆ. ಇದರ ಪರಿಣಾಮ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್, ಹರಿಹರದ ಗಂಗಾನಗರಕ್ಕೆ ನೀರು ನುಗ್ಗಿದೆ.

Advertisement

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ಪ್ರದೇಶಕ್ಕೆ ತುಂಗಭದ್ರಾ ನದಿ ನೀರು ಬಂದಿದೆ. ಅಪಾಯದ ಮಟ್ಟ 11 ಮೀಟರ್ ಆಗಿದ್ದು, ಈಗ ನದಿಯಲ್ಲಿ 9.88 ಮೀಟರ್ ನೀರು ಹರಿಯುತ್ತಿದೆ. ನದಿಪಾತ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಜಾಗ್ರತೆ ವಹಿಸುವಂತೆ ಜನರಿಗೆ ತಿಳಿಸಿದೆ.

ಹರಿಹರ ತಾಲೂಕಿನ ರಾಜನಹಳ್ಳಿಯ ಬಳಿ ನದಿ ನೀರಿನ ನಡುವಿನ ಮರಗಳಲ್ಲಿ ಸಿಲುಕಿಕೊಂಡಿದ್ದ ಮಂಗಗಳ ರಕ್ಷಣಾ ಕಾರ್ಯ ಮುಗಿದಿದೆ. ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next