Advertisement

ಧಾರಾಕಾರ ಮಳೆಗೆ ಮುಂಬೈ ನಗರಿ ತತ್ತರ, ಜನಜೀವನ ಅಸ್ತವ್ಯಸ್ತ; ರೈಲು ಸಂಚಾರ ಸ್ಥಗಿತ

09:24 AM Jul 02, 2019 | Nagendra Trasi |

ಮುಂಬೈ:ವಾಣಿಜ್ಯ ನಗರಿ ಮುಂಬೈಯಲ್ಲಿ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದ್ದು, ರೈಲ್ವೆ ಹಳಿಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ಥವ್ಯಸ್ಥವಾಗಿರುವುದಾಗಿ ವರದಿ ತಿಳಿಸಿದೆ.

Advertisement

ಭಾರೀ ಮಳೆಗೆ ತಗ್ಗು ಪ್ರದೇಶಗಳೆಲ್ಲಾ ಜಲಾವೃತಗೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸೋಮವಾರ ಬೆಳಗ್ಗೆ ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ ಕಚೇರಿಗೆ, ಶಾಲಾ, ಕಾಲೇಜಿಗೆ ತೆರಳುವವರು ತೊಂದರೆ ಅನುಭವಿಸುವಂತಾಯಿತು ಎಂದು ವರದಿ ಹೇಳಿದೆ.

ಬಾಂದ್ರಾ, ಪರೇಲ್ ಮತ್ತು ದಾದರ್ ಪ್ರದೇಶಗಳಲ್ಲಿ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ ವೇಳೆ ಕನಿಷ್ಠ 100 ಮಿ.ಮೀಟರ್ ಮಳೆ ಸುರಿದಿದೆ. ರಾತ್ರಿಯಿಡೀ ಬರೋಬ್ಬರಿ 360 ಮಿಲಿ ಮೀಟರ್ ದಾಖಲೆಯ ಮಳೆ ಸುರಿದಿರುವುದಾಗಿ ವರದಿ ತಿಳಿಸಿದೆ.

ಪಾಲ್ಗಾಟ್ ಪ್ರದೇಶದ ರೈಲ್ವೆ ಹಳಿಗಳು ಜಲಾವೃತಗೊಂಡಿದ್ದರಿಂದ ಮುಂಬೈ-ವಲ್ಸಾಡ್-ಸೂರತ್ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next