Advertisement

ಮಹಾ ಮಳೆಗೆ ಮತ್ತೆ ತುಂಬಿ ಹರಿಯುತ್ತಿದೆ ಕೃಷ್ಣಾ ನದಿ : ಪ್ರವಾಹದ ಭೀತಿ

02:27 PM Aug 18, 2020 | sudhir |

ಬನಹಟ್ಟಿ : ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಹಾಗೂ ವಿವಿಧ ಜಲಾಶಯಗಳಿಂದ ಬಿಡುಗಡೆ ಮಾಡಿರುವ ನೀರಿನಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

Advertisement

ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳ ಲಕ್ಷಾಂತರ ಸಂಖ್ಯೆಯ ಜನ ಮತ್ತು ಜಾನುವಾರುಗಳಿಗೆ ಹಿಪ್ಪರಗಿ ಜಲಾಶಯ ಸಂಜೀವಿನಿಯಾಗಿದ್ದು, ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಹಿಪ್ಪರಗಿ ಜಲಾಶಯದ ಹಿನ್ನಿರಿನಿಂದಾಗಿ ನದಿ ಪಾತ್ರದ ಗ್ರಾಮಗಳ ಹೋಲ ಗದ್ದೆಗಳಿಗೆ ನೀರು ನುಗ್ಗಲಾರಂಬಿಸಿದೆ.

ಕಳೆದ ವಾರವಷ್ಟೇ ತುಂಬಿ ಹರೆದಿದ್ದ ಕೃಷ್ಣೆ ಕಳೆದ ಕೆಲ ದಿನಗಳಿಂದ ನೀರಿನ ಹರಿವಿನಲ್ಲಿ ಕುಷಿತವಾಗಿತ್ತು. ಈಗ ಕೃಷ್ಣೆ ಮತ್ತೋಮ್ಮೆ ತನ್ನ ಆರ್ಭಟವನ್ನು ತೋರಲಾರಂಬಿಸಿದೆ. ಕೋವಿಡ್ ಸಂಕಷ್ಟದ ನಡುವೆ ನದಿಯ ಅಕ್ಕ ಪಕ್ಕದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮತ್ತಷ್ಟು ಭಯ ಪಡುವಂತಾಗಿದೆ.

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವುದರಿಂದ ಇಂದು ಹಿಪ್ಪರಗಿ ಜಲಾಶಯಕ್ಕೆ ಒಟ್ಟು 1,85,000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಅದೇ ರೀತಿಯಾಗಿ ಜಲಾಶಯದಿಂದ 1,85,000 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಮುಂದೆ ಹರಿ ಬೀಡಲಾಗುತ್ತದೆ. ಜಲಾಶಯದ ನೀರಿನ ಮಟ್ಟ 523.70 ಮೀ ಆಗಿದೆ. ನದಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ನದಿ ಪಾತ್ರದ ಜನರು ಸುರಕ್ಷತೆಯ ದೃಷ್ಠಿಯಿಂದ ನದಿಯ ಹತ್ತಿರ ತೆರಳುವುದಾಗಲಿ, ಜಾನುವಾರುಗಳನ್ನು ತೆಗೆದುಕೊಂಡು ಹೋಗುವುದಾಗಲಿ ಮಾಡಬಾರದು. ಒಂದು ವೇಳೆ ಪ್ರವಾಹ ಉಂಟಾದರೂ ಅದನ್ನು ಎದುರಿಸಲು ತಾಲೂಕು ಆಡಳಿತ ಸಿದ್ದವಾಗಿದೆ ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ ಪ್ರಶಾಂತ ಚನಗೋಂಡ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next