Advertisement

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

12:51 AM Oct 21, 2021 | Team Udayavani |

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಹಾಗೂ ಪರಿಸರದ ಪ್ರದೇಶದಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಭಾರೀ ಮಳೆಯಾಗಿದೆ.

Advertisement

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪರಿಸರದಲ್ಲಿ ಭಾರೀ ಮಳೆಗೆ ಕೊಲ್ಲಮೊಗ್ರು ಕಲ್ಮಕಾರು ರಸ್ತೆಯ ಶಾಲಾ ಬಳಿ ಇರುವ ಸೇತುವೆ ಮಳೆಗೆ ಜಲಾವೃತಗೊಂಡಿತು.

ರಸ್ತೆಯಲ್ಲಿ ಕೂಡ ಮಳೆ ನೀರು ಹರಿದಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸಿದರು. ಸುಬ್ರಹ್ಮಣ್ಯ, ಹರಿಹರ, ಐನೆಕಿದು, ಕೊಲ್ಲಮೊಗ್ರು, ಕಲ್ಮಕಾರು, ಪಂಜ, ಯೇನೆಕಲ್ಲು, ಬಳ್ಪ, ಕುಲ್ಕುಂದ, ಬಿಳಿನೆಲೆ, ಕಲ್ಲುಗುಡ್ಡೆ, ಇಚ್ಲಂಪಾಡಿ, ಕೊಣಾಜೆ ಪರಿಸರದಲ್ಲಿಯೂ ಗುಡುಗು ಸಹಿತ ಭಾರೀ ಮಳೆ ಸುರಿದಿದೆ.

ಕೃಷಿ ಚಟುವಟಿಕೆಗಳಿಗೆ ತೊಂದರೆ
ಭಾರೀ ಮಳೆಯಿಂದಾಗಿ ಭತ್ತದ ಕೊಯ್ಲಿಗೆ ಬಹಳಷ್ಟು ತೊಂದರೆಯಾಗಿದೆ. ಮಾತ್ರವಲ್ಲದೇ ಅಡಿಕೆ ಸಹಿತ ಕೃಷಿ ತೋಟಗಳಿಗೆ ತೊಂದರೆಯಾಗಿದೆ. ಸುಳ್ಯ, ಪುತ್ತೂರು ಹೊರತುಪಡಿಸಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಮಳೆ ಪ್ರಮಾಣ ಕಡಿಮೆ ಇತ್ತು. ಉಡುಪಿ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿತ್ತು.

ಇದನ್ನೂ ಓದಿ:ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

Advertisement

ಕರಾವಳಿಯಲ್ಲಿ ಮಳೆ ಸಾಧ್ಯತೆ
ಕೆಲವು ದಿನಗಳ ಹಿಂದೆ ಬಿರುಸುಗೊಂಡ ಮಳೆ ಕರಾವಳಿಯಲ್ಲಿ ಸದ್ಯ ತಗ್ಗಿದ್ದು, ಅ. 22ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಅ. 22ರಿಂದ 24ರವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ತುಸು ಏರಿಕೆ ಕಂಡಿದ್ದು, ಸೆಕೆಯ ವಾತಾವರಣ ಇತ್ತು. ಮಂಗಳೂರಿನಲ್ಲಿ 30.8 ಡಿ.ಸೆ. ಗರಿಷ್ಠ ಉಷ್ಣಾಂಶ ಮತ್ತು 24.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next