Advertisement

ಹೆಬ್ರಿ ಸುತ್ತಮುತ್ತ ಸಿಡಿಲು ಸಹಿತ ಭಾರೀ ಮಳೆ, ಹಾನಿ

12:53 AM Oct 19, 2022 | Team Udayavani |

ಹೆಬ್ರಿ/ಮಂಗಳೂರು/ಉಡುಪಿ: ಕಳೆದೆರಡು ದಿನಗಳಿಂದ ಹೆಬ್ರಿ ಸುತ್ತಮುತ್ತ ಭಾರೀ ಮಳೆ ಯಾಗುತ್ತಿದ್ದು ಮಂಗಳವಾರವೂ ಮಧ್ಯಾಹ್ನದ ಬಳಿಕ ಹೆಬ್ರಿ, ಶಿವಪುರ, ಮುದ್ರಾಡಿ, ಕಬ್ಬಿನಾಲೆ, ಕುಚ್ಚಾರು, ಸೋಮೇಶ್ವರ ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆಯಾಯಿತು.

Advertisement

ಹೆಬ್ರಿ ಹುತ್ತುರ್ಕೆ ಬಳಿ ಸಿಡಿಲು ಬಡಿದ ಪರಿಣಾಮ ವಿದ್ಯುತ್‌ ಪರಿವರ್ತಕ ಸ್ಫೋಟಗೊಂಡು ಮೆಸ್ಕಾಂಗೆ ಸುಮಾರು 1.25 ಲಕ್ಷ ರೂ ನಷ್ಟ ಸಂಭವಿಸಿದೆ. ಪರಿಸರದ ಮನೆಗಳ ವಿದ್ಯುತ್‌ ಉಪಕರಣಗಳು ಹಾನಿಗೀಡಾಗಿವೆ.

ದನ ಸಾವು
ಹೆಬ್ರಿ, ಕುಚ್ಚಾರು ಗ್ರಾಮದ ಕೃಷ್ಣಯ್ಯ ಶೆಟ್ಟಿ ಅವರ ದನವೊಂದು ಸಿಡಿಲು ಬಡಿದು ಮೃತಪಟ್ಟಿದೆ. ಮಂಗಳವಾರ ಹಲವೆಡೆ ಬಿಟ್ಟುಬಿಟ್ಟು ಮಳೆ ಸುರಿದಿದೆ. ಮಣಿಪಾಲ, ಉಡುಪಿ, ಪರ್ಕಳ ಸುತ್ತಮುತ್ತ ಕೆಲಕಾಲ ಉತ್ತಮ ಮಳೆಯಾಗಿದೆ. ದ.ಕ. ಜಿಲ್ಲೆಯ ಪುತ್ತೂರು, ಸುಳ್ಯ ಮತ್ತು ಮಂಗಳೂರು ತಾಲೂಕಿನ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.

ಮಳೆ ಬಿರುಸು ನಿರೀಕ್ಷೆ
ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಅ. 19, 21 ಮತ್ತು 22ರಂದು ಎಲ್ಲೋ ಅಲರ್ಟ್‌ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಅಲ್ಪಸ್ವಲ್ಪ ಮಳೆಯಾಗಿದೆ. ಸೆಕೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ30 ಡಿ.ಸೆ. ಗರಿಷ್ಠ 24.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next