ಚಿಕ್ಕಮಗಳೂರು: ಕಳೆದ ರಾತ್ರಿ ಮೂಡಿಗೆರೆ ಚಿಕ್ಕಮಗಳೂರಿನಲ್ಲಿ ಸುರಿದ ಮಳೆಯ ಅವಾಂತರಗಳನ್ನು ಸೃಷ್ಟಿಸಿದೆ .
ಮೂಡಿಗೆರೆಯಲ್ಲಿ ಭಾರೀ ಮಳೆ ಬಂದಿದ್ದು ಮಹಾಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ . ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದ ಗಿರಿಜನ ಕಾಲೋನಿಯ ಕೂಲಿ ಕಾರ್ಮಿಕ ಹರೀಶ್ ಮನೆಗೆ ಹಾನಿಯಾಗಿದೆ .
ಕಳೆದ ನಾಲ್ಕೈದು ದಿನದಿಂದ ಸಂಜೆ ಈ ಭಾಗದಲ್ಲಿ ಮಳೆ ಸುರಿಯುತ್ತಲೇ ಇದೆ. ಭಾರೀ ಮಳೆಯಿಂದ ಜಿಲ್ಲಾದ್ಯಂತ ಅಲ್ಲಲ್ಲಿ ಸಣ್ಣ-ಪುಟ್ಟ ಅವಾಂತರ ಉಂಟಾಗಿದ್ದು ಜಿಲ್ಲಾ ಕೇಂದ್ರ ಚಿಕ್ಕಮಗ ಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ .
ಟಿಪ್ಪು ನಗರ ಸಮೀಪ , ಸಣ್ಣ ಕಾಲುವೆಗೆ ದೊಡ್ಡ ಕಾಲುವೆಯ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ . ಸೇತುವೆಯಲ್ಲಿ ಭಾರಿ ಪ್ರಮಾಣದ ಕಸ ಕಡ್ಡಿ ತುಂಬಿಕೊಂಡಿದ್ದು ನೀರು ಸರಾಗವಾಗಿ ಹರಿಯದೆ , ಉಕ್ಕಿ ಹರಿದು ತಗ್ಗು ಪ್ರದೇಶಗಳು ಜಲಾವೃತವಾಗಿವೆ .
ಇಂದು ಬೆಳಿಗ್ಗೆ ನಗರಸಭೆ ಅಧ್ಯಕ್ಷರು ಮತ್ತು ಆಯುಕ್ತರು ಸಿಬ್ಬಂದಿಯೊಂದಿಗೆ ತೆರಳಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದಾರೆ .
ಈ ವೇಳೆ ಕೆಲ ಜಮೀನು ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.