Advertisement

ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಮನೆಯ ಮೇಲೆ ಮರ ಬಿದ್ದು ಇಬ್ಬರು ಸಾವು

07:35 AM Aug 10, 2022 | Team Udayavani |

ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ, ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆಯ ಮೇಲೆ ಬೃಹತಾಕಾರದ ಮರ ಬಿದ್ದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ತಲಗೂರು ಗ್ರಾಮದ ಚಂದ್ರಮ್ಮ ಹಾಗೂ ಸರಿತಾ ಮೃತ ದುರ್ದೈವಿಗಳು.

ಮಂಗಳವಾರ ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಎಂಬವರ ಮನೆಯಲ್ಲಿ ಚಂದ್ರಮ್ಮ, ಸರಿತಾ ಹಾಗೂ ಸರಿತಾ ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್ ಮಲಗಿದ್ದ ವೇಳೆ ಮನೆಯ ಪಕ್ಕದಲ್ಲೇ ಇದ್ದ ಭಾರಿ ಗಾತ್ರದ ಮರವೊಂದು ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು ಮನೆಯೊಳಗೆ ಮಲಗಿದ್ದ ಸರಿತಾ ರವರು ಸ್ಥಳದಲ್ಲಿ ಮೃತಪಟ್ಟಿದ್ದು ಚಂದ್ರಮ್ಮ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮೃತರಾದ ಸರಿತಾ ಮತ್ತು ಚಂದ್ರಮ್ಮ ಸಂಬಂಧಿಕರಾಗಿದ್ದು ಅಕ್ಕಪಕ್ಕದ ಮನೆಯವರಾಗಿದ್ದಾರೆ.

ಇದನ್ನೂ ಓದಿ : ಬೆಂಗಳೂರು ತೆಕ್ಕೆಗೆ ಅಮೆರಿಕದ ಶೀಫ‌ರ್‌: 110 ವರ್ಷಗಳ ಇತಿಹಾಸ ಇರುವ ಅಮೆರಿಕ ಪೆನ್‌ ಕಂಪನಿ

Advertisement
Advertisement

Udayavani is now on Telegram. Click here to join our channel and stay updated with the latest news.

Next