Advertisement

ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಅಲ್ಲಲ್ಲಿ ಧರೆಗುರುಳಿದ ಮರ, ಜನಜೀವನ ಅಸ್ತವ್ಯಸ್ತ

01:46 PM Aug 08, 2022 | Team Udayavani |

ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಹಲವು ಕಡೆ ಮರಗಳು ಧರೆಗುರುಳಿ ಅಪಾರ ನಷ್ಟ ಸಂಭವಿಸಿದೆ.

Advertisement

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೂರು, ದೇವರಮನೆ, ಗುತ್ತಿ, ಮುಂತಾದ ಕಡೆ ಭಾರಿ ಗಾಳಿ ಮಳೆಯಾಗುತ್ತಿದ್ದು ಬಣಕಲ್ ಸರಕಾರಿ ಆಸ್ಪತ್ರೆಯ ಪಕ್ಕದಲ್ಲೇ ವಾಸಿಸುತ್ತಿರುವ ಸ್ಟಾಪ್ ನರ್ಸ್ ಸುಮಿತ್ರಾ ಅವರು ವಾಸವಿದ್ದ ಕೊಠಡಿಯ ಮೇಲೆ ಮರ ಬಿದ್ದು ಮೇಲ್ಛಾವಣಿ ಜಖಂ ಆಗಿದೆ.

ಅಲ್ಲದೆ ಬಣಕಲ್ ಪಟ್ಟಣದಲ್ಲೂ ಹಲವು ಮರಗಳು ರಸ್ತೆಗೆ ಉರುಳಿಬಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಶಾಲೆಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಕಡೆ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದ್ದು ಅಲ್ಲದೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದರೂ ಶಾಲೆಗಳಿಗೆ ರಜೆ ಘೋಷಿಸಿಲ್ಲ.

ಇದನ್ನೂ ಓದಿ : ಬಿಹಾರದಲ್ಲಿ ಮತ್ತೆ ಗರಿಗೆದರಿದ ರಾಜಕೀಯ; ಸೋನಿಯಾಗೆ ನಿತೀಶ್ ದೂರವಾಣಿ ಕರೆ, NDAಗೆ ಗುಡ್ ಬೈ?

Advertisement
Advertisement

Udayavani is now on Telegram. Click here to join our channel and stay updated with the latest news.

Next