Advertisement

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

11:40 PM Jun 01, 2023 | Team Udayavani |

ಉಡುಪಿ: ಜಿಲ್ಲೆಯ ಹಲವೆಡೆ ಗುರುವಾರ ಸಾಧಾರಣ ಮಳೆಯಾಗಿದೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಸುರಿದ ಮಳೆ, ಗಾಳಿಗೆ ಹೆಬ್ರಿ ಭಾಗದಲ್ಲಿ ಮನೆಗಳು, ತೋಟಕ್ಕೆ ಹಾನಿ ಸಂಭವಿಸಿದೆ.

Advertisement

ಬ್ರಹ್ಮಾವರ, ಉಡುಪಿ, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ. ಹೆಬ್ರಿ ತಾಲೂಕಿನ ಬೆಳ್ವೆಯಲ್ಲಿ ಭಾರತಿ, ಗಿರಿಯ ಪೂಜಾರಿ ಅವರ ಮನೆಗೆ ಹಾನಿ ಸಂಭವಿಸಿದೆ. ಶ್ರೀಮತಿ, ಬಚ್ಚಹಾಂಡ, ಶೀನಹಾಂಡ ಅವರ ಅಡಿಕೆ, ತೆಂಗು, ಮಾವಿನ ಮರಗಳಿಗೆ ಹಾನಿಯಾಗಿದೆ.

ಗುರುವಾರ ಹಗಲು ಮೋಡ, ಬಿಸಿಲಿನ ವಾತಾವರಣವಿತ್ತು. ಸಂಜೆ ಮಣಿಪಾಲ, ಉಡುಪಿ ಸುತ್ತಮುತ್ತ ಅಲ್ಪ ಮಳೆಯಾಗಿದೆ.

ಮೂಲ್ಕಿಯಲ್ಲಿ ಉತ್ತಮ ಮಳೆ
ಮಂಗಳೂರು: ಮೂಲ್ಕಿಯಲ್ಲಿ ಗುರುವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ಜೂ. 2ರಿಂದ 5ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸ ಲಾಗಿದ್ದು, ಈ ವೇಳೆ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಯಾಗುವ ಸಾಧ್ಯತೆ ಇದೆ.

ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆ ಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಸಾಧಾ ರಣ ಮಳೆ ಸುರಿದಿದೆ.

Advertisement

ಸಿಡಿಲು ಬಡಿದು ಗಾಯ
ಪುತ್ತೂರು : ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಸಿಡಿಲು ಬಡಿದು ಗಾಯ ಗೊಂಡ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಶೇಖಮಲೆ ಜಾರತ್ತಾರಿನಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ.
ಜಾರತ್ತಾರು ರಾಮ ಅವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದೆ. ರಾಮ ಕೊಟ್ಟಿಗೆಯಲ್ಲಿ ಮಲಗಿದ್ದರು. ಅವರ ಬೆನ್ನಿನ ಭಾಗಕ್ಕೆ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next