Advertisement

ಕಲಬುರಗಿ: ಭಾರೀ ಮಳೆಗೆ ರಸ್ತೆ ಸಂಪರ್ಕ ಕಡಿತ; ಸಾರ್ವಜನಿಕರ ಪರದಾಟ

10:54 AM Oct 14, 2022 | Team Udayavani |

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಅನೇಕ ಗ್ರಾಮಗಳಲ್ಲಿ ನದಿ, ಹಳ್ಳಕೊಳ್ಳ ತುಂಬಿ ಹರಿಯುತ್ತಿವೆ.

Advertisement

ತಾಲೂಕಿನ ಮುಲ್ಲಾಮಾರಿ ಜಲಾಶಯದಲ್ಲಿ ಹರಿದ ನೀರಿನಿಂದಾಗಿ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ, ಅಣವಾರ, ಗರಗಪಳ್ಳಿ ಮತ್ತು ಜಟ್ಟೂರು ಗ್ರಾಮಗಳ ಬಳಿ ನಿರ್ಮಿಸಿದ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗಿದ್ದರಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡು ಜನರು ತೊಂದರೆ ಪಡಬೇಕಾಯಿತು.

ಚಿಂಚೋಳಿ ತಾಲೂಕಿನಲ್ಲಿ ವ್ಯಾಪಕವಾಗಿ ಸುರಿದ ಮಳೆಗೆ ಚಂದ್ರಂಪಳ್ಳಿ ಮತ್ತು ಕೆಳದಂಡೆ ಮುಲ್ಲಾಮಾರಿ ಜಲಾಶಯ ಭರ್ತಿಯಾಗಿರುವುದರಿಂದ ಕೋಡಿಗಳ ಮೂಲಕ ನೀರು ಹರಿದು ಬಿಟ್ಟ ಪರಿಣಾಮವಾಗಿ ಮುಲ್ಲಾಮಾರಿ ನದಿಯು ಮೈದುಂಬಿ ಹರಿಯುತ್ತಿದೆ. ಗುರುವಾರ ರಾತ್ರಿ ಸಿಡಿಲು ಗುಡುಗು ಮಿಂಚಿನಿಂದ ಕೂಡಿದ ಆರ್ಭಟದ ಮಳೆಗೆ ಜನರು ಬೆಚ್ಚಿ ಬಿದ್ದು ಭಯಭೀತರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next