Advertisement

ಭಾರೀ ಮಳೆ: ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ

02:39 PM Aug 29, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ‌ ಸೃಷ್ಟಿಯಾದ ಅವಾಂತರ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಎಲ್ಲಾ  ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.

Advertisement

ಇದನ್ನೂ ಓದಿ:ಕೊಡಗಿನಲ್ಲಿ ರಾತ್ರೋರಾತ್ರಿ ಅನಾಹುತ ಸೃಷ್ಟಿಸಿದ ಮಹಾಮಳೆ

ಸುದ್ದಿಗಾರರ ಜತೆ ಮಾತನಾಡಿದ ಅವರು,  ಮಳೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ.ಅಲ್ಲಿ ನೀರು ನಿಂತಿರೋದನ್ನ ಗಮನಿಸಿ, ಅಲ್ಲಿನ ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ.ಪರ್ಯಾಯ ಮಾರ್ಗವಾಗಿ ವಾಹನಗಳು ಹೋಗಲು ಸೂಚನೆ ನೀಡಿದ್ದೇನೆ ಎಂದರು.

ಹಿರಿಯ ನಾಯಕರಾದ ಯಡಿಯೂರಪ್ಪ ಭೇಟಿಯಾಗಿದ್ದೆ.ಪ್ರಮುಖವಾಗಿ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ.ಅವರು ದೆಹಲಿಯಲ್ಲಿ ರಾಷ್ಟ್ರೀಯ ನಾಯಕರ ಭೇಟಿಯಾಗಿ ಬಂದಿದ್ದಾರೆ. ಪ್ರಧಾನಿಗಳು ೨ನೇ ತಾರೀಖು ಮಂಗಳೂರಿಗೆ ಬರ್ತಿದ್ದಾರೆ.

ಪ್ರಧಾನಿಗಳ ಕಾರ್ಯಕ್ರಮದ ಯಶಸ್ವಿ ಬಗ್ಗೆ ಚರ್ಚೆ ಮಾಡಿದ್ದೇವೆ.ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ಜನ ಸಂಪರ್ಕ ಪ್ರವಾಸ, ಆರು ಕಡೆ ದೊಡ್ಡ ರ್ಯಾಲಿ ನಡೆಯುತ್ತದೆ. ನಾವು ಯಡಿಯೂರಪ್ಪ, ಕಟೀಲ್ ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇವೆ.ರಾಜ್ಯಮಟ್ಟದ ಸಭೆಯನ್ನು ಮಾಡಿ, ಸೆಪ್ಟೆಂಬರ್ ಅಕ್ಟೋಬರ್ ತಿಂಗಳಿನ ಪ್ರವಾಸದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು.

Advertisement

ಕೆರೆ ಕಟ್ಟೆ ಒಡೆಯದಂತೆ ಸುರಕ್ಷಿತ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ.ಎಲ್ಲೆಲ್ಲಿ ಜನವಸತಿಗೆ ನೀರು ಹೋಗಿದೆ,ಅಲ್ಲಿ ಆಶ್ರಯ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ.900 ಕೋಟಿ ಹಣ ಎಲ್ಲ ಡಿಸಿಗಳ ಅಕೌಂಟ್ ನಲ್ಲಿದೆ.ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ.ಡಿಸಿಗಳ ಜೊತೆಗೂ ಚರ್ಚೆ ಮಾಡಿದ್ದೇನೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ನೀರನ್ನು ಕ್ಲಿಯರ್ ಮಾಡಲು ಸೂಚನೆ ನೀಡಿದ್ದೇನೆ.

Advertisement

Udayavani is now on Telegram. Click here to join our channel and stay updated with the latest news.

Next