Advertisement
ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿದ್ದು, 6.3 ಮಿ. ಎತ್ತರದಲ್ಲಿ ಹರಿಯುತ್ತಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ನೇತ್ರಾವತಿ ನದಿ ತುಂಬಿ ಹರಿಯಲು ಪ್ರಾರಂಭಿಸಿದೆ. ಬಾರಿ ವೇಗವಾಗಿ ನೀರು ಹರಿಯುತ್ತಿದ್ದು ರಾತ್ರಿ ವೇಳೆ ನೀರಿನ ಮಟ್ಟದಲ್ಲಿ ಇನ್ನಷ್ಟು ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಲಾಗಿದ್ದು ಬೆಳಿಗ್ಗೆ 6 ಗಂಟೆಯ ವೇಳೆಗೆ 8.5 ಮಿ.ಎತ್ತರದಲ್ಲಿ ಅಪಾಯದ ಮಟ್ಟವನ್ನು ತಲುಪಿದೆ.
Related Articles
Advertisement
ಪಾಣೆಮಂಗಳೂರು, ಕಂಚಿಕಾರ್ ಪೇಟೆ, ಜಕ್ರಿಬೆಟ್ಟು, ಕೈಕುಂಜೆ ಬಸ್ತಿಪಡ್ಪು ಮುಂತಾದ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪಾಣೆಮಂಗಳೂರು ಮತ್ತು ಕಂಚಿಕಾರ್ ಪೇಟೆಯ ರಸ್ತೆಗೆ ನೀರು ಬಂದಿದೆ. ರಾತ್ರಿ ವೇಳೆ ಅತಿಯಾದ ಗಾಳಿ ಮಳೆಗೆ ನೀರಿನ ಮಟ್ಟ ಏರಿಕೆಯಾಗಿದೆ .
ತಹಶೀಲ್ದಾರ್ ಸ್ಮಿತಾ ರಾಮು , ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಟಿ.ಡಿ.ನಾಗರಾಜ್, ವಿವೇಕಾನಂದ, ಎಸ್.ಐ.ಗಳಾದ ಅವಿನಾಶ್, ಹರೀಶ್, ಮೂರ್ತಿ ಅವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ನೆರೆ ಬರುವ ಬಗ್ಗೆ ಮುನ್ಸೂಚನೆ ಇದ್ದ ಕಾರಣ ತಾಲೂಕು ಆಡಳಿತ ಸಂಪೂರ್ಣ ಸಜ್ಜಾಗಿದೆ. ಇದರ ಜೊತೆ ಸ್ಥಳೀಯ ಬೋಟ್ ಹಾಗೂ ಮುಳುಗು ತಜ್ಞರು ಅಗ್ನಿಶಾಮಕ ದಳ ಸಂಪೂರ್ಣ ಸಜ್ಜಾಗಿ ನಿಂತಿದೆ.
ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಭಾರೀ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ನದಿ ನೀರು ಹೆದ್ದಾರಿಗೆ ನುಗ್ಗಿರುವ ಘಟನೆ ನಡೆದಿದೆ.
ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ದರ್ಪಣ ತೀರ್ಥ ಸೇತುವೆಯಿಂದ ಸುಮಾರು ಇನ್ನೂರು ಮೀಟರ್ ದೂರದವರೆಗೆ ಹೆದ್ದಾರಿ ಜಲಾವೃತಗೊಂಡಿದೆ.
ಕುಮಾರಪರ್ವತ ಸುಬ್ರಹ್ಮಣ್ಯ ಸುತ್ತಮುತ್ತ ಭಾರಿ ಮಳೆ ಹಿನ್ನೆಲೆ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಹಲವು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ನದಿಯ ಉಪನದಿ ರಾಜ್ಯ ಹೆದ್ದಾರಿಯಲ್ಲಿರುವ ದರ್ಪಣ ತೀರ್ಥ ಸೇತುವೆ ಜಲಾವೃತಗೊಂಡಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ.