Advertisement

ವಾಯುಭಾರ ಕುಸಿತ: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ

01:11 PM Oct 13, 2020 | keerthan |

ಮಣಿಪಾಲ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕರ್ನಾಟಕ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಸೋಮವಾರವು ಹಲವೆಡೆ ಮಳೆಯಾಗಿದ್ದು, ಮಂಗಳವಾರ ಬೆಳಿಗ್ಗೆ ಬಿರುಸು ಪಡೆದಿದೆ.

Advertisement

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಉಡುಪಿ, ಕಾರ್ಕಳ, ಕಾಪು, ಮಂಗಳೂರು ಭಾಗದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಉತ್ತಮ ಮಳೆಯಾಗುತ್ತಿದೆ. ಹಲವೆಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ:ಇನ್ನಾದರೂ ಎಚ್ಚೆತ್ತುಕೊಳ್ಳಿ:92 ದಿನದಲ್ಲಿ ರಾಜ್ಯದಲ್ಲಿ ಒಂಬತ್ತು ಸಾವಿರ ಜನರು ಸೋಂಕಿಗೆ ಬಲಿ!

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇದಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡುಗಳಲ್ಲಿಯೂ ಭಾರೀ ಮಳೆ ಮುಂದುವರಿದಿದೆ. ಕೆಲವೆಡೆ ಎಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next