Advertisement

ಮಹಾಮಳೆಗೆ ತತ್ತರಿಸಿದ ಮುಂಬೈ: ಶಾಲಾ ಕಾಲೇಜು ರಜೆ; ಬಸ್‌, ರೈಲು ಸಂಚಾರ ಅಸ್ತವ್ಯಸ್ಥ

10:18 AM Sep 06, 2019 | Team Udayavani |

ಮುಂಬೈ: ಮಹಾನಗರಿ ಮುಂಬೈ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತತ್ತರಿಸಿದೆ. ಗುರುವಾರವೂ  ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

Advertisement

ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ನೀರು ನಿಂತಿರುವುದರಿಂದ ಹಲವು ರೈಲುಗಳನ್ನು ಸ್ಥಗಿತ ಮಾಡಲಾಗಿದೆ. ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರನ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮುಂಬೈ, ಥಾಣೆ, ಪಾಲ್ಘಾರ್‌, ರಾಯ್‌ ಗಡ್‌ ಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next