Advertisement

ಕಲಬುರಯಲ್ಲಿ ವ್ಯಾಪಕ ಮಳೆ: ಜಲಾಶಯಗಳಿಂದ ನೀರು ಬಿಡುಗಡೆ! ಜನರು ಎಚ್ಚರಿಕೆಯಿಂದಿರಲು ಸೂಚನೆ

12:26 PM Oct 14, 2020 | sudhir |

ಕಲಬುರಗಿ: ಜಿಲ್ಲಾದ್ಯಂತ ಮಂಗಳವಾರ ತಡರಾತ್ರಿ ವ್ಯಾಪಕ ಮಳೆ ಸುರಿದ ಪರಿಣಾಮ ಜಿಲ್ಲೆಯ ಬಹುತೇಕ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ನದಿಗೆ ನೀರು ಹರಿಬಿಡಲಾಗುತ್ತಿದೆ.

Advertisement

ಬುಧವಾರ ಬೆಳಿಗ್ಗೆ 8 ಗಂಟೆಗೆ ಗಂಡೋರಿ ನಾಲಾ ಜಲಾಶಯಕ್ಕೆ ಒಳಹರಿವು 35,000 ಕ್ಯುಸೆಕ್ ನೀರು ಇದ್ದು, 30,000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಾಲಿಂಗೆ ತಿಳಿಸಿದ್ದಾರೆ.

ಆಳಂದ ತಾಲೂಕಿನ ಅಮರ್ಜಾ ಜಲಾಶಯಕ್ಕೆ ಒಳಹರಿವು 15,000 ಕ್ಯುಸೆಕ್ ನೀರು ಇದ್ದು, 13,000 ಕ್ಯುಸೆಕ್ ನೀರನ್ನು ಬಿಡಲಾಗಿದೆ.

ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ಒಳಹರಿವು 70,000 ಕ್ಯುಸೆಕ್ ನೀರು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಭೀಮಾ ನದಿಗೆ ಬಿಡಲಾಗಿದೆ.

ಇದನ್ನೂ ಓದಿ:ವಿಜಯಪುರದಲ್ಲಿ ನಿರಂತರ ಮಳೆ: ಜನಜೀವನ ಅಸ್ತವ್ಯಸ್ತ, ತುಂಬಿ ಹರಿಯುತ್ತಿರುವ ನದಿ-ಹಳ್ಳಗಳು !

Advertisement

ಬೆಣ್ಣೆತೋರಾ ಜಲಾಶಯಕ್ಕೆ ಒಳಹರಿವು 80,510 ಕ್ಯುಸೆಕ್ ಇದ್ದು, 59,350 ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ಲೋವರ್ ಮುಲ್ಲಾಮಾರಿ ಜಲಾಶಯಕ್ಕೆ 38,500 ಕ್ಯುಸೆಕ್ ನೀರು ಒಳಹರಿವಿದ್ದು, 57,000 ಕ್ಯುಸೆಕ್ ನೀರು ಹೊರಬಿಡಲಾಗಿದೆ.

ಚಿಂಚೋಳಿ ತಾಲೂಕಿನ ಚಂದ್ರಮಪಳ್ಳಿ ಜಲಾಶಯದ ಒಳ ಹರಿವು 6,395 ಕ್ಯುಸೆಕ್ ಇದ್ದರೆ, ಹೊರ ಹರಿವು 6,125 ಕ್ಯುಸೆಕ್ ಇದೆ. ಅಪ್ಪರ ಮುಲ್ಲಾಮಾರಿ ಜಲಾಶಯದಲ್ಲಿ 13,020 ಕ್ಯುಸೆಕ್ ನೀರು ಒಳ ಹರಿವಿದ್ದು, ಅಷ್ಟೆ ಪ್ರಮಾಣದ ನೀರು ಹೊರ ಬಿಡಲಾಗಿದೆ.

ಇದನ್ನೂ ಓದಿ:ಅಂಜನಾದ್ರಿಯಲ್ಲಿ ಅರ್ಚಕ ವಿದ್ಯಾದಾಸ ಬಾಬಾರಿಂದ ನಿರಾತಂಕವಾಗಿ ಪೂಜೆ ಆರಂಭ

ಮುಂದಿನ 3-4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ನದಿ ಪಾತ್ರದ ಜನರು ನದಿ ಕಡೆಗೆ ಹೋಗಬಾರದು. ತಮ್ಮ ಜಾನುವಾರಗಳನ್ನು ಸಹ ನದಿ ದಂಡೆಗೆ‌ ಬಿಡದಂತೆ ಹಾಗೂ ತುಂಬಾ ಎಚ್ಚರಿಕೆಯಿಂದಿರುವಂತೆ ಜಗನ್ನಾಥ ಹಾಲಿಂಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next