Advertisement

ಮಹಾಲಕ್ಷ್ಮಿ ಲೇಔಟ್ :  ಭಾರೀ ಮಳೆಗೆ ಕುಸಿಯುವ ಹಂತದಲ್ಲಿ 3 ಅಂತಸ್ತಿನ ಮಹಡಿ : ಗೋಪಾಲಯ್ಯ ಭೇಟಿ

10:28 AM Oct 13, 2021 | Team Udayavani |

ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ವೃಷಭಾವತಿ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳ ಮಹಡಿ  ಕುಸಿಯುವ ಹಂತದಲ್ಲಿದ್ದು ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

Advertisement

ನಂತರ ಮಾಧ್ಯಮ ಗಳಿಗೆ ಮಾತನಾಡಿದ ಸಚಿವರು, ಮನೆಯಲ್ಲಿ ಬಾಡಿಗೆಗೆ ಇದ್ದವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ.  ಅಕ್ಕ ಪಕ್ಕದ ಮನೆಯಲ್ಲಿ ವಾಸವಿದ್ದವರನ್ನು ಬೇರೆಡೆಗೆ  ಶಿಫ್ಟ್ ಮಾಡಲಾಗಿದೆ. ಅವರುಗಳಿಗೆ  ವಸತಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.  ಯಾರಿಗೂ ಹಾನಿಯಾಗದಂತೆ ತೆರವುಗೊಳಿಸುವಂತೆ ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸೂಚಿಸಲಾಗಿದೆ.

ಮನೆಯ ಮಾಲೀಕರು ನಾಪತ್ತೆಯಾಗಿದ್ದು. ಪೊಲೀಸ್ ರು ಹುಡುಕುವ ಯತ್ನದಲ್ಲಿದ್ದಾರೆ ನಿರಾಶ್ರಿತರಿಗೆ ನಮ್ಮ ಮತ್ತು  ಸರ್ಕಾರ ಕಡೆಯಿಂದ ನೆರವು ನೀಡಲಾಗುವುದು ಎಂದು ತಿಳಿಸಿದರು. ಸ್ಥಳಕ್ಕೆ ಬಿ ಬಿ ಎಂ ಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next