Advertisement

ಭಾರೀ ಮಳೆ: ಮನೆ ಗೋಡೆ ಕುಸಿದು ಬಾಲಕ ಸಾವು; ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

10:07 AM Jul 15, 2022 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ನಿರಂತವಾಗಿ  ಮಳೆ ಸುರಿಯುತ್ತಿದ್ದು, ಖಾನಾಪುರ ತಾಲೂಕಿನ ಲಿಂಗನಮಠ ಎಂಬ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ.

Advertisement

ಖಾನಾಪುರ ತಾಲೂಕಿನ ಲಿಂಗನಮಠ ಎಂಬ ಗ್ರಾಮದ ನಿವಾಸಿ ಅನಂತು ಪಾಶೆಟ್ಟಿ(15) ಮೃತ ಬಾಲಕ.

ಗುರುವಾರ ರಾತ್ರಿ ಅನಂತು, ಮನೆಯ ಪಕ್ಕದಲ್ಲಿ ಹಸುವಿಗೆ ಮೇವು ಹಾಕಲು ತೆರಳಿದ್ದ ವೇಳೆ ಗೋಡೆ ಕುಸಿದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಈ ಮಧ್ಯೆ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು ಕೃಷ್ಣಾ ದೂದಗಂಗಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ.   ಮಹಾರಾಷ್ಟ್ರದಲ್ಲಿಯ ಮಳೆಯಿಂದ ಈಗ ಕೃಷ್ಣಾ ನದಿಗೆ ಒಟ್ಟು 1.26 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದೇ ವೇಳೆ ಹಿಪ್ಪರಗಿ ಜಲಾಶಯದಿಂದ 1. 20 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.

Advertisement

ಘಟಪ್ರಭಾ ನದಿ ವ್ಯಾಪ್ತಿಯ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯಕ್ಕೆ ಈಗ 25 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ. ಇದರಿಂದ ಜಲಾಶಯದಲ್ಲಿ ಒಂದೇ ದಿನ ಐದು ಅಡಿ ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮಥ್ಯದ 9 ಜಲಾಶಯದಲ್ಲಿ ಈಗ 2132 ಅಡಿ ನೀರು ಸಂಗ್ರಹವಾಗಿದೆ.  ಇನ್ನು ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯಕ್ಕೆ 15 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಟ್ಟು 2079 ಅಡಿ ಸಾಮಥ್ಯ ೯ದ ಜಲಾಶಯದಲ್ಲಿ ಈಗ 2062 ಅಡಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ: ಮಣಿಪಾಲ: ಬೆಂಕಿಗಾಹುತಿಯಾದ ಫ್ಯಾಮಿಲಿ ರೆಸ್ಟೋರೆಂಟ್

ಶುಕ್ರವಾರ, ಶನಿವಾರ ಶಾಲೆಗಳಿಗೆ ರಜೆ ಘೋಷಣೆ  

ಕಳೆದ ಒಂದು ವಾರದಿಂದ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next