Advertisement

ಮಹಾ ಮಳೆಗೆ ಸೇತುವೆಗಳು ಮುಳುಗುವ ಭೀತಿ

09:05 AM Jul 21, 2020 | Suhan S |

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಮತ್ತು ಗಡಿ ಭಾಗದಲ್ಲಿ ಮತ್ತೆ ಮಳೆ ಸುರಿಯಲಾರಂಭಿಸಿದ್ದು, ಗಡಿ ಭಾಗದ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಸೋಮವಾರ ಸಂಜೆಯಿಂದ ಜಿಟಿಜಿಟಿ ಸುರಿಯಲು ಆರಂಭಿಸಿದೆ.

Advertisement

ಹೀಗಾಗಿ ಚಿಕ್ಕೋಡಿ ಮತ್ತು ಗಡಿ ಭಾಗದ ವಿವಿಧ ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೆರೆಯ ಕೊಂಕಣ ಭಾಗದಲ್ಲಿ ಮಳೆ ಸುರಿಯುತ್ತಿದೆ. ಪರಿಣಾಮ ನದಿಗಳ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆ ಕಂಡು ಬಂದಿದೆ. ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಸೋಮವಾರ ರಾತ್ರಿ ಹೆಚ್ಚಾಗಿ ಮಳೆ ಸುರಿದರೆ ಮಂಗಳವಾರ ಸಂಜೆಯವರಿಗೆ ತಾಲೂಕಿನ ಸೇತುವೆಗಳು ಸೇತುವೆ ಮುಳುಗುವ ಹಂತ ತಲುಪಲಿದೆ. ಈಗಾಗಲೇ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 40 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 10.560 ಕ್ಯೂಸೆಕ್‌ ನೀರು ಬರಲಾರಂಭಿಸಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಒಟ್ಟು 50,560 ಕ್ಯೂಸೆಕ್‌ ನೀರು ಹರಿದು ಹಿಪ್ಪರಗಿ ಬ್ಯಾರೇಜಗೆ ಹೋಗುತ್ತಿದೆ. ಅಲ್ಲಿಂದ 44 ಸಾವಿರ ಕ್ಯೂಸೆಕ್‌ ನೀರು ಹರಿದು ಆಲಮಟ್ಟಿಗೆ ಹೋಗುತ್ತಿದೆ ಎಂದು ತಹಶೀಲ್ದಾರ್‌ ಸುಭಾಷ ಸಂಪಗಾವಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next