Advertisement

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ: ಮುಳುಗಡೆಯಾದ ವಾಹನಗಳು, ಜನಜೀವನ ಅಸ್ತವ್ಯಸ್ತ

03:55 PM Sep 10, 2020 | keerthan |

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಬದಿ ಪಾರ್ಕ್ ಮಾಡಿದ್ದ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ.

Advertisement

ಬುಧವಾರ ಸಂಜೆ ವೇಳೆಗೆ ಆರಂಭವಾದ ಮಳೆಯಲ್ಲಿ ರಾತ್ರಿಯಿಡಿ ಸುರಿದಿದೆ. ನಗರದ ಬಸವನಗುಡಿ, ರಾಜಾಜಿ ನಗರ, ಮಲ್ಲೇಶ್ವರ, ಗಿರಿನಗರ, ರಾಜರಾಜೇಶ್ವರಿ ನಗರ, ಯಶವಂತಪುರ, ಕತ್ರಿಗುಪ್ಪೆ, ಬನಶಂಕರಿ ಸೇರಿದಂತೆ ಹಲವೆಡೆ ಚರಂಡಿ ತುಂಬಿ ಹರಿದು ರಸ್ತೆಗಳು ನದಿಗಳಂತಾಗಿತ್ತು. ಗಲೀಜು ನೀರು ಅಂಗಡಿಗಳಿಗೆ, ಮನೆಗಳಿಗೆ ನುಗ್ಗಿದ ಕಾರಣ ಹಲವರು ಸಂಕಷ್ಟ ಅನುಭವಿಸಿದರು.

ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ: ಬೀದಿ ವ್ಯಾಪಾರಿಗಳಿಗೂ ಆನ್‌ಲೈನ್‌ ಮಾರಾಟ ವ್ಯವಸ್ಥೆ

Advertisement

ಕರ್ನಾಟಕ ಕರಾವಳಿಯಲ್ಲೂ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಳೆ ( ಶುಕ್ರವಾರ) ಇದೇ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next