Advertisement

ಮಲೆನಾಡಿನಲ್ಲಿ ಅಬ್ಬರದ ಮಳೆ: ತುಂಬಿ ಹರಿಯುತ್ತಿರುವ ತುಂಗ-ಭದ್ರಾ, ಹೇಮಾವತಿ ನದಿ

01:11 PM Jul 23, 2021 | Team Udayavani |

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

Advertisement

ಕಳೆದ ಎರಡು ದಿನದಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ತುಂಗ-ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್. ಆರ್.ಪುರ, ಚಿಕ್ಕಮಗಳೂರು, ತರೀಕೆರೆ , ಕಿಗ್ಗಾ, ಕೆರೆಕಟ್ಟೆ, ಕುದುರೆಮುಖ, ಕಳಸ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು ರಾಜ್ಯದಲ್ಲಿ ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಬಹಿತೇಕ ಕಡೆ ಮಳೆರಾಯನ ಅಬ್ಬರ ಜೋರಾಗಿದ್ದು, ಕರ್ನಾಟಕಕ್ಕೆ ಮತ್ತೊಂದು ಪ್ರವಾಹ ಭೀತಿ ಎದುರಾಗುವ ಸಾದ್ಯತೆ ಇದೆ ಎನ್ನುವ ಆತಂಕ ಶುರುವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next