Advertisement

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

06:53 PM May 20, 2024 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ತಾಲ್ಲೂಕುಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.

Advertisement

ಮಲೆನಾಡು,ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಇಂದು ಕೂಡ ಜೋರಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೂರು, ಜಾವಳಿ, ಕಡೂರು, ಬೀರೂರು, ಅಜ್ಜಂಪುರ, ತರೀಕೆರೆ ಭಾಗದಲ್ಲಿ ಮಳೆ ಸುರಿದಿದೆ.

ಮಳೆಯಿಂದಾಗಿ ರಸ್ತೆಯಲ್ಲಿ ಸುಮಾರು ಒಂದೂವರೆ ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಕಳೆದ 8-10 ದಿನಗಳಿಂದ ಕೊಟ್ಟಿಗೆಹಾರದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಜನರು ಕೂಡ ಫುಲ್ ಖುಷ್ ಆಗಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next