Advertisement

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ: ಧರೆಗುರುಳಿದ ಮರಗಳು

04:13 PM May 18, 2020 | keerthan |

ಚಿಕ್ಕಮಗಳೂರು; ಜಿಲ್ಲಾದ್ಯಂತ ಮಳೆಯ ಆರ್ಭಟ ಶುರುವಾಗಿದೆ. ಭಾನುವಾರ ಸಂಜೆಯಿಂದ ಶುರುವಾದ ವರುಣನ ಆರ್ಭಟ ಸೋಮವಾರವು ಮುಂದುವರೆದಿದೆ.

Advertisement

ಜಿಲ್ಲೆಯ ಮಲೆನಾಡು, ಬಯಲು ಸೀಮೆ ಭಾಗದಲ್ಲಿ ಎಡಬಿಡದೆ ಮಳೆಯಾಗಿದ್ಧು ಜೊತೆಯ ಗಾಳಿಯ ರಭಸಕ್ಕೆ ಅನೇಕ ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

ಚಿಕ್ಕಮಗಳೂರು ನಗರದಲ್ಲಿ ಭಾನುವಾರ ಮಧ್ಯರಾತ್ರಿ ಎರಡು ಗಂಟೆಗೂ ಹೆಚ್ಚುಕಾಲ ಎಡಬಿಡದೆ ಮಳೆಯಾಗಿದ್ದು, ಸೋಮವಾರ ಬೆಳಿಗ್ಗೆಯೂ ತುತುಂರು ಮಳೆಯಾಗಿದೆ.

ಇನ್ನೂ ಜಿಲ್ಲೆಯ ಕಡೂರು, ಬೀರೂರು, ತರೀಕರೆ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಮಲೆನಾಡು ಭಾಗವಾದ ಮೂಡಿಗರೆ, ಕಳಸ, ಕೊಟ್ಟಿಗೆಹಾರ, ಎನ್.ಆರ್.ಪುರ, ಕೊಪ್ಪ, ಶ್ರೀ ಗೇರಿ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ಅಡಿಕೆ, ಕಾಫಿ, ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next