Advertisement

Heavy Rain: ಇಂದು ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ

08:55 PM Jun 20, 2024 | Team Udayavani |

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್‌ 21ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಅಲರ್ಟ್‌ ಘೋಷಿಸಲಾಗಿದೆ.

Advertisement

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಂಡಮಾರುತದ ಪ್ರಭಾವ ಕರ್ನಾಟಕದ ಕರಾವಳಿ ಉದ್ದಕ್ಕೂ ಬೀರಲಿದ್ದು, ಗಂಟೆಗೆ 35 ಕಿ.ಮೀನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ.

ಜೂನ್ 23ರಂದು ಭಾರೀ ಮಳೆ:

ಜೂನ್‌ 23ರಂದು ಬಲವಾದ ಗಾಳಿಯ ಒಮ್ಮುಖದ ಕಾರಣದಿಂದಾಗಿ, ಕರಾವಳಿ ಮತ್ತು ಪಶ್ಚಿಮ ಘಟ್ಟದ ಪಕ್ಕದ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಲವಾದ ಗಾಳಿ ಮತ್ತು ಭೂ ಕುಸಿತದ ಸಾಧ್ಯತೆಗಳಿವೆ. ಉಡುಪಿ, ಉತ್ತರ ಕನ್ನಡ, ದ.ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next