Advertisement

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ?

11:41 PM Aug 16, 2019 | Team Udayavani |

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಆಯ್ದ ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. 2-3 ದಿನಗಳಿಂದ ಮಳೆ ತುಸು ವಿರಾಮ ನೀಡಿತ್ತು. ಆದರೆ, ಕರ್ನಾಟಕ ಮತ್ತು ಕೇರಳದ ಕರಾವಳಿ ನಡುವೆ ಕಡಿಮೆ ಒತ್ತಡದ ತಗ್ಗು (ಆಫ್ಶೋರ್ಡ್ ಟ್ರಫ್) ಹಾಗೂ ತಮಿಳುನಾಡಿನಲ್ಲಿ ಚಂಡಮಾರುತದ ಪರಿಚಲನೆ ಕಂಡು ಬಂದ ಹಿನ್ನೆಲೆಯಲ್ಲಿ ಶನಿವಾರ ಕೆಲ ಭಾಗಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

Advertisement

ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಮಳೆ ನಿರೀಕ್ಷೆ ತುಂಬಾ ಕಡಿಮೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ. ಕರಾವಳಿಯ ದ. ಕನ್ನಡ, ಉಡುಪಿ, ಉ. ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next