Advertisement

ಭಾರೀ ಮಳೆಗೆ ದಾವಣಗೆರೆಯ ಮಾಗಾನಹಳ್ಳಿ ಸೇತುವೆ ಮುಳುಗಡೆ

08:47 AM Jul 18, 2021 | Team Udayavani |

ದಾವಣಗೆರೆ: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ದಾವಣಗೆರೆ ಸಮೀಪದ ಮಾಗಾನಹಳ್ಳಿ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

Advertisement

ದಾವಣಗೆರೆ- ಹರಪನಹಳ್ಳಿ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಮಳೆ ಮುಂದುವರಿದರೆ ಈ ಭಾಗದ ಸಂಪರ್ಕ ಸ್ಥಗಿತವಾಗುವ ಭೀತಿ ಎದುರಾಗಿದೆ.

ಇದನ್ನೂ ಓದಿ:ಮುಂಬೈನಲ್ಲಿ ಮಳೆ ತಂದ ಸಂಕಷ್ಟ: ಗೋಡೆ ಕುಸಿದು ಹತ್ತು ಮಂದಿ ಸಾವು

ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದರೂ ಕೆಲವೊಂದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಕೆಲವು ಯುವಕರು ಸೇತುವೆ ದಾಟುವ ಸಾಹಸ ಮಾಡುತ್ತಿದ್ದಾರೆ.

Advertisement

ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next