Advertisement

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

12:28 PM Jul 04, 2024 | Team Udayavani |

ಕುಮಟಾ: ತಾಲೂಕಿನಲ್ಲಿ ವಿಪರೀತ ಮಳೆಯಾದ ಪರಿಣಾಮ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ತೀರ ಪ್ರದೇಶಗಳಲ್ಲಿ ನೆರೆಯ ಭೀತಿ ಎದುರಾಗಿದೆ.

Advertisement

ಚಂಡಿಕಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ ಪರಿಣಾಮ ಕುಮಟಾ ಶಿರಸಿ ರಸ್ತೆಯ ಅಳಕೋಡ ಬ್ರಿಜ್ ಮುಳುಗಡೆಯಾಗಿದೆ.ಇದರಿಂದಾಗಿ ಶಿರಸಿ ಕುಮಟಾ ರಸ್ತೆ ಸಂಪರ್ಕ ಸಂಪೂರ್ಣವಾಗಿ ಬಂದ್ ಆಗಿದೆ. ಮಾಸ್ತಿಹಳ್ಳ ಸಮೀಪ ಗುಡ್ಡ ಕುಸಿತ ಉಂಟಾಗಿ ರಸ್ತೆಯಲ್ಲಿ ಮಣ್ಣು ತುಂಬಿಕೊಂಡಿದೆ.

ನದಿ ತೀರ ಪ್ರದೇಶಗಳಾದ ಮಿರ್ಜಾನ್, ದೀವಗಿ, ಹೆಗಡೆ, ಕೋಡ್ಕಣಿ, ಬರ್ಗಿಯಲ್ಲಿ ಮನೆಗಳಿಗೆ ನೀರು ನುಗ್ಗುತ್ತಿದೆ. ಈಗಾಗಲೇ ಕೆಲವೆಡೆಗಳಲ್ಲಿ ಜನ, ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದ್ದು ಯಾವುದೇ ಪ್ರಾಣಿ ಹಾನಿ ಸಂಭವಿಸಿದ ಘಟನೆ ವರದಿಯಾಗಿಲ್ಲ.

ಇದನ್ನೂ ಓದಿ: Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Advertisement

Udayavani is now on Telegram. Click here to join our channel and stay updated with the latest news.

Next