Advertisement

Rain: ಸುಳ್ಯ ತಾಲೂಕಿನ ಕೆಲವೆಡೆ ಬಿರುಸಿನ ಮಳೆ, ಮಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ

05:21 PM Aug 16, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಮಳೆಯಾದ ವರದಿಯಾಗಿದೆ. ಸುಳ್ಯ ತಾಲೂಕಿನ ಕೆಲವು ಕಡೆ ಬಿರುಸಿನ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಹನಿ ಮಳೆಯಾಗಿದೆ.

Advertisement

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಆ.16ರ ಬೆಳಗ್ಗೆವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದುವರೆದಂತೆ ಎಲ್ಲೋ ಅಲರ್ಟ್‌ ಇದೆ. ಮಂಗಳೂರಿನಲ್ಲಿ 30.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.4 ಡಿ.ಸೆ. ಏರಿಕೆ ಮತ್ತು 24.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.5 ಡಿ.ಸೆ. ಏರಿಕೆಯಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next