Advertisement

ಬಾಳುಗೋಡು: ಕೊಚ್ಚಿಹೋದ ಏಕೈಕ ಮರದ ಸೇತುವೆ: ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ‌ ನಿವಾಸಿಗಳು

10:51 AM Jul 10, 2022 | Team Udayavani |

ಗುತ್ತಿಗಾರು: ಶನಿವಾರ(ಜು.9) ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದ ಪಾಲ(ಮರದ ಸೃತುವೆ)  ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

Advertisement

ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಗತಿಯಾಗಿತ್ತು. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ ಮರದ ಪಾಲ ನಿರ್ಮಿಸಿಕೊಂಡು ಹೊಳೆ ದಾಟುತ್ತಿದ್ದರು.

ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ ಸ್ಥಳೀಯವಾಗಿ ಸಿಗುವ ಮರ, ಬಿದಿರು, ಬಳ್ಳಿಗಳನ್ನು ಬಳಸಿ ಕಾಲು ಸೇತುವೆ ದುರಸ್ತಿ ಪಡಿಸಿ ಜೀವನ ಕಳೆಯುತ್ತಿದ್ದಾರೆ. ಈ ಭಾರಿ ಸುರಿದ ವಿಪರೀತ ಮಳೆಗೆ  ಹೆಚ್ಚಿನ ಪ್ರವಾಹ ಬಂದು ಕಾಲು ಸೇತುವೆ  ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಲ್ಲಿನ 11 ಮನೆಗಳಿಗೆ ಇತರ ಪ್ರದೇಶಗಳಿಗೆ ಸಂಪರ್ಕಿಸಲು ಅಸಾಧ್ಯವಾಗಿದೆ.

ಇದನ್ನೂ ಓದಿ:ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಭೂಕುಸಿತ: ಸಂಚಾರ ಬಂದ್

ಇದೇ ಪರಿಸರದ ಹರಿಹರ ಪಲ್ಲತ್ತಡ್ಕದಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಯೊಂದು ಭಾಗಶಃ ಹಾನಿಗೊಳಗಾಗಿದೆ. ಕಜ್ಜೋಡಿ ಎಂಬಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next