Advertisement

ಕರಾವಳಿಯ ಕೆಲವೆಡೆ ಮಳೆ : ಉಡುಪಿ ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ

08:29 AM Sep 10, 2022 | Team Udayavani |

ಮಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ಬೇಗೆ ಹೆಚ್ಚಿತ್ತು.

Advertisement

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ: ನಿರಂತರ ಮಳೆ
ಉಡುಪಿ: ಜಿಲ್ಲೆಯಲ್ಲಿ ಮಳೆ ವಾತಾವರಣ ಮುಂದುವರಿದಿದ್ದು, ಸೆ.10ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, 13 ಮನೆಗಳಿಗೆ ಹಾನಿ ಸಂಭವಿಸಿದೆ. ಕಾರ್ಕಳ 1, ಬ್ರಹ್ಮಾವರ 3, ಕುಂದಾಪುರ ಭಾಗದಲ್ಲಿ 9 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಗುರುವಾರ ತಡರಾತ್ರಿ, ಶುಕ್ರವಾರ ಬಿಟ್ಟುಬಿಟ್ಟು ಧಾರಕಾರ ಮಳೆ ಸುರಿದಿದೆ. ಕುಂದಾಪುರ, ಕಾರ್ಕಳ, ಕಾಪು, ಉಡುಪಿ, ಬೈಂದೂರು ಸುತ್ತಮುತ್ತ ಕೆಲವೆಡೆ ರಾತ್ರಿ ವೇಳೆ ಹೆಚ್ಚು ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಪರ್ಕಳ ಸುತ್ತಮುತ್ತ ಮಧ್ಯಾಹ್ನ ಬಳಿಕ ಧಾರಾಕಾರ ಮಳೆ ಸುರಿದಿದ್ದು, ಕೆಲವು ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.

ಇದನ್ನೂ ಓದಿ : ಟಾಟಾದಿಂದ ಐಫೋನ್‌ ಉತ್ಪಾದನೆ? ವಿಸ್ಟ್ರಾನ್‌ ಕಾರ್ಪ್‌ ಜತೆಗೆ ಮಾತುಕತೆ

Advertisement

Udayavani is now on Telegram. Click here to join our channel and stay updated with the latest news.

Next