Advertisement

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ

08:28 PM Jan 09, 2021 | Team Udayavani |

ಮಣಿಪಾಲ: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಸಿಡಿಲು ಮಿಂಚು ಸಹಿತ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

Advertisement

ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಸಂಜೆಯ ವೇಳೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಕುಂದಾಪುರ ಹಾಗೂ ಕಾರ್ಕಳದಲ್ಲಿ ಇಂದು ಸಂಜೆ 5ರಿಂದ 6ರವರೆಗೂ ಧಾರಕಾರ ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ಸಿಡಿಲು ಗುಡುಗಿನೊಂದಿಗೆ ನಿರಂತರ ಮಳೆಯಾಗಿದ್ದು ಮಳೆ ಹಾನಿ ಕುರಿತು ಯಾವುದೇ ವರದಿಯಾಗಿಲ್ಲ.

ಉಡುಪಿ, ಕಾಪು, ಬ್ರಹ್ಮಾವರ, ಕೋಟದಲ್ಲಿ ಹನಿ ಮಳೆಯಾಗಿದೆ. ಹಾಲಾಡಿ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಿದ್ದರೇ, ಬಸ್ರೂರು,  ಸಿದ್ದಾಪುರ, ಬೆಳ್ಮಣ್ ವ್ಯಾಪ್ತಿಯಲ್ಲೂ ಮಳೆ ಸುರಿದಿದೆ.

ಇನ್ನು ಬಜ್ಪೆ, ಕಿನ್ನಿಗೋಳಿಯಲ್ಲಿ  ಸಾಧಾರಣ ಮಳೆಯಾಗಿದೆ. ಸುಳ್ಯ, ಪುತ್ತೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next