Advertisement

ಗೌರಿ ಹೊಳೆ ಭರ್ತಿ: ಅಪಾಯದಲ್ಲಿ ಕುಂಡಡ್ಕ ಸೇತುವೆ

12:40 AM Aug 07, 2019 | Team Udayavani |

ಸವಣೂರು: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಾರೆಯಿಂದ ಪೆರುವಾಜೆ – ಕುಂಡಡ್ಕ – ನಾಡೋಳಿ – ಸಾರಕರೆ – ಸರ್ವೆ ಮೂಲಕ ವೀರಮಂಗಲ ಕುಮಾರಧಾರಾ ತಲುಪುವ ಗೌರಿ ಹೊಳೆ ತನ್ನ ಹರಿವು ಹೆಚ್ಚಿಸಿಕೊಂಡಿದೆ.

Advertisement

ನಿರಂತರವಾಗಿ ಮಳೆ ಸುರಿದರೆ ಹೊಳೆ ತಟದ ಕೃಷಿ ತೋಟಗಳು ಮುಳುಗಡೆಯಾಗಲಿವೆ. ಪಾಲ್ತಾಡಿ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮಗಳನ್ನು ಜೋಡಿಸುವಲ್ಲಿ ಗೌರಿಹೊಳೆಗೆ ಅಡ್ಡಲಾಗಿರುವ ಕುಂಡಡ್ಕ ಕಿರು ಸೇತುವೆಯಲ್ಲಿ ನೀರು ಅಪಾಯಕಾರಿ ಮಟ್ಟದಲ್ಲಿ ಇದೆ. ತೀರಾ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಹಂತಕ್ಕೆ ಬಂದಿರುವ ಸೇತುವೆಯೂ ಕೊಚ್ಚಿ ಹೋಗುವ ಭೀತಿಯನ್ನು ಜನತೆ ಎದುರಿಸುತ್ತಿದ್ದಾರೆ.

ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು, ಕಾಣಿಯೂರು, ಪೆರುವಾಜೆಗೆ ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಬರಲಿದೆ. ಈ ಸೇತುವೆ ದಾಟಿ ಮಕ್ಕಳು ಚೆನ್ನಾವರ ಕಿ.ಪ್ರಾ. ಶಾಲೆ, ಮುಕ್ಕೂರು ಹಿ.ಪ್ರಾ. ಶಾಲೆ ಸವಣೂರು, ಪೆರುವಾಜೆ ಕಾಲೇಜುಗಳಿಗೆ ಹೋಗುತ್ತಿದ್ದಾರೆ. ಯಾವ ಸಂದರ್ಭದಲ್ಲಿ ಅಪಾಯ ತಂದೊಡ್ಡಬಹುದು ಎನ್ನುವುದನ್ನು ಊಹಿಸಲು ಅಸಾಧ್ಯದ ಸ್ಥಿತಿ ಇದೆ.

ಕಿಂಡಿ ಅಣೆಕಟ್ಟು ಮುಳುಗಡೆ

ಇದೇ ಹೊಳೆಯ ಚೆನ್ನಾವರದಲ್ಲಿ ಹೊಸದಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಬೃಹತ್‌ ಮರಗಳು ಸಿಲುಕಿಕೊಂಡಿವೆ. ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ.

Advertisement

ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಪ್ರತೀ ಬಾರಿಯೂ ಮಳೆ ಬಂದಾಗ ಇಲ್ಲಿನ ಸೇತುವೆಯಲ್ಲಿ ಸಂಚರಿಸುವುದೇ ಅಪಾಯಕಾರಿಯಾಗಿದೆ. ಸೇತುವೆಯೂ ದುರ್ಬಲವಾಗಿದೆ. ಸೇತುವೆ ದುರಸ್ತಿಗೊಳಿಸುವಂತೆ ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ಭರವಸೆ ಮಾತ್ರ ದೊರಕುತ್ತಿದೆ. ಮುಂದಿನ ಬಾರಿಯಾದರೂ ಈ ಅಪಾಯಕಾರಿ ಸನ್ನಿವೇಶ ಬಾರದಂತೆ ಸಂಬಂಧಪಟ್ಟವರು ಗಮನ ಹರಿಸಬೇಕಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಸಮಸ್ಯೆ ಪರಿಹಾರಕ್ಕೆ ಕೇಳಿಕೊಳ್ಳಲಾಗುವುದು ಎಂದು ಚೆನ್ನಾವರ ಅಭ್ಯುದಯ ಯುವಕ ಮಂಡಲದ ಪದಾಧಿಕಾರಿಗಳು ತಿಳಿಸಿದ್ದಾರೆ.

ತೋಟಕ್ಕೆ ನೀರು ನುಗ್ಗುವ ಭೀತಿ
ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ-ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ತನಕವೂ ಹೊಳೆಯ ಎರಡೂ ಬದಿಗಳಲ್ಲಿ ತೋಟಗಳಿದ್ದು, ಮಳೆ ಇದೇ ರೀತಿ ಮುಂದುವರಿದರೆ ತೋಟಕ್ಕೆ ಮಳೆ ನೀರು ನುಗ್ಗುವ ಭೀತಿಯನ್ನು ಕೃಷಿಕರು ಎದುರಿಸುತ್ತಿದ್ದಾರೆ.

ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರಾದಂತಹ ದೊಡ್ಡನದಿಗಳು ಅಪಾಯಕಾರಿ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿವೆ. ಸಾರ್ವಜನಿಕರು ಅಥವಾ ಮಕ್ಕಳು ನೀರಿನ ಕಡೆಗೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹೆಚ್ಚು ಮಳೆಯಿಂದಾಗಿ ಪರಿಸರದಲ್ಲಿ ಅವಘಡಗಳೇನಾದರೂ ಸಂಭವಿಸಿದರೆ ತತ್‌ಕ್ಷಣ ಠಾಣೆಯ ದೂರವಾಣಿ (08257-271995) ಅಥವಾ ತಮ್ಮ ಮೊಬೈಲ್ (9743053901) ಸಂಖ್ಯೆಗೆ ಮಾಹಿತಿ ನೀಡಿ ಸಹಕರಿಸಿ. ಅನಾಹುತಗಳನ್ನು ನಿಯಂತ್ರಿಸಲು ಕೈಜೋಡಿಸಿ ಎಂದು ಬೆಳ್ಳಾರೆ ಠಾಣೆ ಪಿಎಸ್‌ಐ ಡಿ.ಎನ್‌. ಈರಯ್ಯ ಮನವಿ ಮಾಡಿದ್ದಾರೆ.

ಠಾಣಾಧಿಕಾರಿ ಮನವಿ
ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರಾದಂತಹ ದೊಡ್ಡನದಿಗಳು ಅಪಾಯಕಾರಿ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿವೆ. ಸಾರ್ವಜನಿಕರು ಅಥವಾ ಮಕ್ಕಳು ನೀರಿನ ಕಡೆಗೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹೆಚ್ಚು ಮಳೆಯಿಂದಾಗಿ ಪರಿಸರದಲ್ಲಿ ಅವಘಡಗಳೇನಾದರೂ ಸಂಭವಿಸಿದರೆ ತತ್‌ಕ್ಷಣ ಠಾಣೆಯ ದೂರವಾಣಿ (08257-271995) ಅಥವಾ ತಮ್ಮ ಮೊಬೈಲ್ (9743053901) ಸಂಖ್ಯೆಗೆ ಮಾಹಿತಿ ನೀಡಿ ಸಹಕರಿಸಿ. ಅನಾಹುತಗಳನ್ನು ನಿಯಂತ್ರಿಸಲು ಕೈಜೋಡಿಸಿ ಎಂದು ಬೆಳ್ಳಾರೆ ಠಾಣೆ ಪಿಎಸ್‌ಐ ಡಿ.ಎನ್‌. ಈರಯ್ಯ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next