Advertisement

ಹಿಮಾಚಲ ಪ್ರದೇಶದಲ್ಲಿ ಆರೆಂಜ್‌ ಅಲರ್ಟ್‌

01:25 AM Jul 11, 2019 | Team Udayavani |

ಹೊಸದಿಲ್ಲಿ: ಅಸ್ಸಾಂ, ಹಿಮಾಚಲಪ್ರದೇಶ, ರಾಜಸ್ಥಾನ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಇಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, 62 ಸಾವಿರ ಮಂದಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಬ್ರಹ್ಮಪುತ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ, ಮುಂಬಯಿನಲ್ಲೂ ವರುಣನ ಅಬ್ಬರ ಮುಂದುವರಿದಿದ್ದು, ಗುರುವಾರವೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next