Advertisement

Heavy Rain: ಆ.31ಕ್ಕೆ ಉಡುಪಿ ಜಿಲ್ಲೆಯಲ್ಲಿ “ರೆಡ್ ಅಲರ್ಟ್”: ಬಿರುಸಿನ ಮಳೆ ಸಾಧ್ಯತೆ

05:42 PM Aug 30, 2024 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡದಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಆ.30ರಂದು “ರೆಡ್‌ ಅಲರ್ಟ್‌’ ಘೋಷಿಸಿದೆ. ಉಡುಪಿ ಜಿಲ್ಲೆಯಲ್ಲಿ ಆ.30ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಿಸಿದೆ.

Advertisement

ಈ ವೇಳೆ ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆ.31ರಂದು ಆರೆಂಜ್‌ ಅಲರ್ಟ್‌ ಮತ್ತು ಸೆ.1, 2ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ
ಇರುವುದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಮಂಗಳೂರಿನಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಉಳಿದಂತೆ ಮೋಡದಿಂದ ಕೂಡಿದ ವಾತಾವರಣ ಇತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ ತಾಲೂಕಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ.

ಇದನ್ನೂ ಓದಿ:Chamarajanagar: ಆನೆ ಕಳೆಬರ ಪತ್ತೆ- 7-8 ತಿಂಗಳ ಹಿಂದೆ ಸಾವು ಶಂಕೆ

ಉಡುಪಿ ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಗುರುವಾರ ಹಗಲಿನಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆಯಾಗಿದ್ದರೆ, ಸಂಜೆಯ ಬಳಿಕ ಸಿಡಿಲಿನ ಅಬ್ಬರದೊಂದಿಗೆ ಉತ್ತಮ ಮಳೆ ಸುರಿದಿದೆ. ಕಾರ್ಕಳ ಮತ್ತು ಕುಂದಾಪುರತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿದಿದೆ.

Advertisement

ಮಂಗಳೂರಿನಲ್ಲಿ 28.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕಗಿಂತ 0.6 ಡಿ.ಸೆ. ಕಡಿಮೆ ಮತ್ತು 23 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಆ.31ರಂದು ಭಾರೀ ಮಳೆ?: ರೆಡ್‌ ಅಲರ್ಟ್‌
ಉಡುಪಿ ಜಿಲ್ಲೆಯಲ್ಲಿ ಆ.31ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ
ರೆಡ್‌ ಅಲರ್ಟ್‌ ಘೋಷಿಸಿದೆ. ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇನ್ನು ಉಡುಪಿ, ದ.ಕ, ಉ.ಕನ್ನಡ, ಚಿಕ್ಕಮಗ ಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಶುಕ್ರವಾರ ಆರೆಂಜ್‌ ಅಲರ್ಟ್‌ ಘೋಷಿ ಸಲಾಗಿದೆ. 30-40 ಕಿ.ಮೀ. ಸಹಿತ ನಿರಂತರ ಗಾಳಿ ಬೀಸುವ ಸಾಧ್ಯತೆಗಳಿವೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿ. ಸೆ. ಮತ್ತು 20 ಡಿ.ಸೆ. ಆಗಿರಬಹುದು.

Advertisement

Udayavani is now on Telegram. Click here to join our channel and stay updated with the latest news.

Next