Advertisement

Heavy Rain ಉಡುಪಿ: 40ಕ್ಕೂ ಅಧಿಕ ಮನೆಗಳಿಗೆ ಹಾನಿ

12:27 AM Jul 17, 2024 | Team Udayavani |

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಮಳೆ ಪ್ರಮಾಣ ಕಡಿಮೆಯಾಗಿದ್ದರೂ, ಕುಂದಾಪುರ, ಬೈಂದೂರು, ಬ್ರಹ್ಮಾವರ ಭಾಗದಲ್ಲಿ ನೆರೆಯಿಂದ ಜನರು ತತ್ತರಿಸಿದರು. ಕಳೆದ ಎರಡು ದಿನಗಳಿಂದ ಸುರಿದ ಗಾಳಿಮಳೆಗೆ ಜಿಲ್ಲೆಯಲ್ಲಿ 40ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.

Advertisement

ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಮನೆಗಳ ಮೇಲೆ ಮರ ಬಿದ್ದು, ನೀರು ನುಗ್ಗಿ ವ್ಯಾಪಕ ಹಾನಿ ಸಂಭವಿಸಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಪಶ್ಚಿಮಘಟ್ಟ ತಪ್ಪಲಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸೌಪರ್ಣಿಕಾ, ಕುಬj, ವಾರಾಹಿ, ಸ್ವರ್ಣಾ ನದಿಗಳು ತುಂಬಿ ಹರಿಯುತ್ತಿದ್ದು, ನದಿಪಾತ್ರದ ಜನತೆ ನೆರೆ ಸಂಕಷ್ಟ ಅನುಭವಿಸಿದ್ದಾರೆ.

ಕುಂದಾಪುರ, ಬೈಂದೂರು, ಬ್ರಹ್ಮಾವರ ಭಾಗದಲ್ಲಿ ಹಲವಾರು ಮನೆ, ತಗ್ಗು ಪ್ರದೇಶ, ಗದ್ದೆ, ತೋಟಗಾರಿಕೆ ಪ್ರದೇಶ ಜಲಾವೃತಗೊಂಡಿತ್ತು.

ಗ್ರಾಮೀಣ ಭಾಗದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳು ಸ್ಥಗಿತಗೊಂಡು ಸಂಚಾರ ಸಂಕಷ್ಟದಿಂದ ಕೂಡಿತ್ತು.

Advertisement

ಸೀತಾನದಿ ತುಂಬಿ ಹರಿದ ಪರಿಣಾಮ ಕೆಲಕಾಲ ಆಗುಂಬೆ-ಸೋಮೇಶ್ವರ ಹೆದ್ದಾರಿ ಸಂಪರ್ಕ ಕಡಿತಗೊಂಡು ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಮಂಗಳವಾರ ಸಾಧಾರಣ ಮಳೆಯಾಗಿದ್ದು, ಹೆಚ್ಚು ಹಾನಿ ಸಂಭವಿಸಿಲ್ಲ.

ಗಾಳಿಯಿಂದಾಗಿ ಜಿಲ್ಲೆಯಲ್ಲಿ 152 ವಿದ್ಯುತ್‌ ಕಂಬ ಧರೆಗುರುಳಿದ್ದು, 2.18 ಕಿ. ಮೀ. ವಿದ್ಯುತ್‌ ಲೈನ್‌ ಮತ್ತು 8 ವಿದ್ಯುತ್‌ ಪರಿವರ್ತಕಗಳಿಗೆ ಹಾನಿ ಸಂಭವಿಸಿದೆ. 25.72 ಲಕ್ಷ ರೂ. ನಷ್ಟ ಸಂಭವಿಸಿದೆ.ಕಾರ್ಕಳ 99.8, ಕುಂದಾಪುರ 186.9, ಉಡುಪಿ 98.8, ಬೈಂದೂರು 150.9, ಬ್ರಹ್ಮವರ 164.3, ಕಾಪು 60.6, ಹೆಬ್ರಿ 202.2 ಮಿ. ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 147.3 ಮಿ. ಮೀ. ಸರಾಸರಿ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next